23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಸಹಯೋಗದಲ್ಲಿ ಗುರುವಾಯನಕೆರೆಯಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ

ಬೆಳ್ತಂಗಡಿ: ಮಂಗಳೂರು ಕೃಷಿಕರ ಸಹಕಾರಿ ಸಂಘ ನಿ ಮಂಗಳೂರು (ಮಾಸ್ ಲಿಮಿಟೆಡ್) ಇವರಿಂದ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇವರ ಸಹಯೋಗದಲ್ಲಿ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆಯು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆ ಇದರ ಗುರುವಾಯನಕೆರೆ ಶಾಖೆಯ ವಠಾರದಲ್ಲಿ ಸೆ.15 ರಂದು ನಡೆಯಿತು.

ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆಯನ್ನು ಮಂಗಳೂರು ಮಾಸ್ ಲಿ. ಸ್ಥಾಪಕ ಅಧ್ಯಕ್ಷರಾದ ಟಿ.ಜಿ ರಾಜಾರಾಮ್ ಭಟ್ ನೆರವೇರಿಸಿ ಶುಭಕೋರಿದರು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಅಧ್ಯಕ್ಷ ಶ್ರೀಧರ ಜಿ ಭಿಡೆ ವಹಿಸಿದ್ದರು.

ವೇದಿಕೆಯಲ್ಲಿ ಪ್ರಗತಿಪರ ಕೃಷಿಕ ಕೆ.ವಸಂತ ಸಾಲಿಯಾನ್ ಕಾಪಿನಡ್ಕ, ಮಾಜಿ ಶಾಸಕ ಕೆ.ಪ್ರಭಾಕರ ಬಂಗೇರ, ಮಾಸ್ ಉಪಾಧ್ಯಕ್ಷರಾದ ಸೀತರಾಮ ರೈ ಸವಣೂರು, ರಬ್ಬರ್ ಸೊಸೈಟಿ ಉಪಾಧ್ಯಕ್ಷ ಅನಂತ ಭಟ್ ಎಂ, ಕಳಿಯ ಸಿ.ಎ ಬ್ಯಾಂಕ್ ಅಧ್ಯಕ್ಷ ವಸಂತ ಮಜಲು, ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್.ಪದ್ಮನಾಭ ಮಾಣಿಂಜೆ, ಮಾಸ್ ಲಿ ಮಂಗಳೂರು ನಿರ್ದೇಶಕರಾದ ಇ.ಸುಂದರ ಗೌಡ, ಶಿವಾಜಿ ಎಸ್ ಸುವರ್ಣ, ಪುಷ್ಪರಾಜ ಅಡ್ಯಂತಾಯ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಮಾಸ್ ಲಿ ಮಂಗಳೂರು ಇದರ ಅಧ್ಯಕ್ಷರಾದ ಭಾಸ್ಕರ ಎಸ್ ಕೋಟ್ಯಾನ್,ನಿರ್ದೇಶಕರಾದ ಎಂ.ಬಿ ನಿತ್ಯಾನಂದ ಮುಂಡೋಡಿ, ಶ್ರೀರಾಮ‌ ಪಿ.ಸಿ,ಮೋನಪ್ಪ ಶೆಟ್ಟಿ ಎಕ್ಕಾರು, ಬಿ.ಪ್ರದೀಪ ಯಡಿಯಾಳ,ಅಶೋಕ್ ಕುಮಾರ್ ಬಳ್ಳಾಳ್,ರಾಜೀವಿ ಆರ್ ರೈ, ಸುಧಾ ಎಸ್ ರೈ,ಬಿ.ನಾರಾಯಣ ನಾಯ್ಕ, ಟಿ.ರಾಘವ ಶೆಟ್ಟಿ, ಪಿ ರಾಜಾರಾಮ ಶೆಟ್ಟಿ, ಸತೀಶ್ ಕೆ,ನಾಗಪ್ಪ ಪೂಜಾರಿ, ಸಿಇಓ ಟಿ.ಮಹಾಬಲೇಶ್ವರ ಭಟ್,ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ನಿರ್ದೇಶಕರಾದ ಎನ್‌ ಪದ್ಮನಾಭ,ಜಯಶ್ರೀ ಡಿ.ಎಂ,ಕೆ.ರಾಮ ನಾಯ್ಕ,ಕೆ.ಜೆ ಅಗಸ್ಟಿನ್, ಸೋಮನಾಥ ಬಂಗೇರ ವರ್ಪಾಳೆ,ಗ್ರೇಶಿಯನ್ ವೇಗಸ್,ಬಾಲಕೃಷ್ಣ ಗೌಡ ಕೆ,ವಿ.ವಿ ಅಬ್ರಾಹಂ, ಹೆಚ್ ಪದ್ಮ ಗೌಡ, ಶಶಿಧರ ಡೋಂಗ್ರೆ, ಬೈರಪ್ಪ,ಆರ್ ಸುಭಾಷಿಣಿ, ರಬ್ಬರ್ ಪ್ರೋಡಕ್ಷನ್ ಕಮಿಷಬರ್ ಪದನಿಮಿತ್ತ ಶೀಜಾ,ವಿಶೇಷ ಆಹ್ವಾನಿತರು ಬಿ‌ಎಸ್ ಅಬ್ರಾಹಂ, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಜು ಶೆಟ್ಟಿ ಉಪಸ್ಥಿತರಿದ್ದು ಸಹಕರಿಸಿದರು.

Related posts

ಓಡಿಲ್ನಾಳ : ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಪ್ರಥಮ ವರ್ಷದ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ನೌಕರರ ಸಂಘದ ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ ಸೈಂಟ್ ಲಾರೆನ್ಸ್ ಕ್ಯಾಥೆಡ್ರಲ್ ಚರ್ಚ್ ವತಿಯಿಂದ ವಿದ್ಯಾನಿಧಿ ಯೋಜನೆಗೆ ಕೊಡುಗೆ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!