July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

ಸುಲ್ಕೇರಿ: ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಟಾ ಮಹೋತ್ಸವದ ದಿನಾಂಕ ಪ್ರಕಟ ಪಡಿಸುವ ಸಭೆ ಸೆ.15 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ್ ಅಜಿಲರವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಡಿಸೆಂಬರ್ 29,30,31 ರಂದು ಧಾಮ ಸಂಪ್ರೋಕ್ಷಣಾ ಪೂರ್ವಕ ಭಗವಾನ್ ಶ್ರೀ ನೇಮಿನಾಥ ಸ್ವಾಮಿಯ ಪ್ರತಿಷ್ಠಾ ಮಹೋತ್ಸವ ನಡೆಸುವ ಬಗ್ಗೆ ದಿನಾಂಕ ಪ್ರಕಟ ಪಡಿಸಲಾಯಿತು.

ಸಭೆಯಲ್ಲಿ ಜಿ.ಎಸ್ ರಾಜೇಂದ್ರ ಕುಮಾರ್ ತುಮಕೂರು, ಶ್ರೀಮತಿ ಕಿರಣ್ ಪಾಟೀಲ್ ನಾಸಿಕ್, ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು, ಶ್ರೀಮತಿ ನವರತ್ನ ತುಮಕೂರು, ಬಸದಿಯ ಪುರೋಹಿತರಾದ ಹರ್ಷ ಇಂದ್ರರು ಉಪಸ್ಥಿತರಿದ್ದರು.

ಬಸದಿಯ ಆಡಳಿತ ಮೊಕ್ತೇಸರರಾದ ರವಿರಾಜ ಹೆಗ್ಡೆ ನಾವರಗುತ್ತು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭಬಸದಿಗೆ ಸಂಬಂಧಿಸಿದ ಹಾಗೂ ಸಮಸ್ತ ಶ್ರಾವಕ ಶ್ರಾವಕಿಯರು ಭಾಗವಹಿಸಿದ್ದರು.ವಕೀಲರಾದ ಅಜಿತ್ ಎನ್ ನಾವರ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.ವಿಜಯ ಕುಮಾರ್ ಜೈನ್ ವಂದಿಸಿದರು.

Related posts

ಕರುಣಾಶ್ರಯ ಸೇವಾ ಟ್ರಸ್ಟ್‌ನಿಂದ ವಾರದ ಒಂದು ದಿನದ ಸೇವಾ ಕಾರ್ಯಕ್ರಮ: ಗುಂಡೂರಿ ಶ್ರೀ ಗುರು ಚೈತನ್ಯ ಸೇವಾಶ್ರಮಕ್ಕೆ ದಿನಸಿ ಸಾಮಾಗ್ರಿ ವಿತರಣೆ

Suddi Udaya

ಉಜಿರೆ: ಸ್ಕೂಟರ್ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕರ್ನಾಟಕ ಮುಸ್ಲಿಮ್ ಜಮಾಅತ್ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್‌ನ ನೂತನ ಸಮಿತಿ ರಚನೆ

Suddi Udaya

ಆರಂಬೋಡಿ ಹೆಲ್ಪಿಂಗ್ ಹ್ಯಾಂಡ್ಸ್ ವಾಟ್ಸಪ್ ಗ್ರೂಪ್ ವತಿಯಿಂದ ಚಿಕಿತ್ಸಾ ನೆರವು

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸುದ್ದಿ ಉದಯ ‘ಬೆಳಕಿನ ಉದಯ’ ದೀಪಾವಳಿ ವಿಶೇಷಾಂಕ ಬಿಡುಗಡೆ: ಶ್ರೀರಾಮ‌ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯವರು ಬಿಡುಗಡೆಗೊಳಿಸಿ ಶುಭ ಹಾರೈಕೆ

Suddi Udaya
error: Content is protected !!