July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ಮಚ್ಚಿನ: ಪುಂಜಾಲಕಟ್ಟೆ ವಲಯ ಮಟ್ಟದ 2023-24 ನೇ ಸಾಲಿನ ತ್ರೋಬಾಲ್ ಪಂದ್ಯಾಟವು ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಪಂದ್ಯಾಟದ ಉದ್ಘಾಟನಾ ಕಾರ್ಯಕ್ರಮವನ್ನು ಮಚ್ಚಿನ ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಶ್ರೀಮತಿ ರುಕ್ಮಿಣಿಯವರು ನೆರವೇರಿಸಿ, ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಪಾಠದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ಹೆಚ್ಚಿನ ಅವಕಾಶ ದೊರೆಯಬೇಕು. ಆ ಮೂಲಕ ಅವರು ತಮ್ಮ ಪ್ರತಿಭೆಯನ್ನು ಪ್ರಕಟ ಪಡಿಸುವುದರ ಜೊತೆಗೆ ದೈಹಿಕ ಸದೃಢತೆಯನ್ನು ಪಡೆಯಲು ಅನುಕೂಲವಾಗುತ್ತದೆ ಎಂದರು.

ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ರೂಪ. ಡಿ ಇವರು ಕ್ರೀಡಾಕೂಟದಲ್ಲಿ ಸೋಲು ಗೆಲುವು ಸಹಜ. ಆದರೆ ವಿದ್ಯಾರ್ಥಿಗಳು ಗೆಲುವನ್ನು ಪಡೆದರೆ ಜೊತೆಗೆ ಸೋಲನ್ನು ಸಮಚಿತ್ತತೆಯಿಂದ ಸ್ವೀಕರಿಸುವ ಮನೋಭಾವ ಹೊಂದಿರಬೇಕು.

ಕ್ರೀಡೆ ಎಂಬುದು ಸಾಮಾಜಿಕ ಶಾಂತಿಗೆ ಪ್ರೇರಣೆಯಾಗಬೇಕು ಎಂದು ನುಡಿದರು. ಕಾರ್ಯಕ್ರಮದಲ್ಲಿ ತಾಲೂಕು ಅಕ್ಷರ ದಾಸೋಹದ ನೋಡಲ್ ಶ್ರೀಮತಿ ತಾರಕೇಶ್ವರಿ, ತಾಲೂಕು ದೈಹಿಕ ಶಿಕ್ಷಕರ ಸಂಘದ ಪದಾಧಿಕಾರಿ ಅಜಿತ್ ಕೊಕ್ರಾಡಿ, ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಚೇತನ, ಶಾಲಾ ಎಸ್‌ಡಿಎಂಸಿ ಕಾರ್ಯಾಧ್ಯಕ್ಷರಾದ ಹೊನ್ನಪ್ಪ ಸಾಲಿಯಾನ್, ಎಸ್. ಡಿ. ಎಂ. ಸಿ ಶಿಕ್ಷಣ ತಜ್ಞರಾದ ಡಾ. ಮಾಧವ ಶೆಟ್ಟಿ ,ಶಾಲಾ ಮುಖ್ಯೋಪಾಧ್ಯಯರಾದ ಪ್ರಕಾಶ್. ಎಸ್. ನಾಯ್ಕ್ ಶಾಲಾ , ಕ್ರೀಡಾಕೂಟದ ವಲಯ ಸಂಘಟಕರಾದ ಸುಭಾಶ್ಚಂದ್ರ ಪಿ. ಪೂಜಾರಿ, ಎಸ್. ಡಿ .ಎಂ.ಸಿ ಸದಸ್ಯೆಯಾಗಿರುವ ಶ್ರೀಮತಿ ಭವ್ಯ, ಶ್ರೀಮತಿ ಕುಸುಮಾವತಿ ಹಾಗೂ ನಿಕಟಪೂರ್ವ ಕಾರ್ಯಾಧ್ಯಕ್ಷರಾದ ರುಕ್ಮಯ ಬಾಳಿಂಜ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ದೈಹಿಕ ಶಿಕ್ಷಕರಾದ ಸುಭಾಶ್ಚಂದ್ರ ಪಿ.ಪೂಜಾರಿಯವರು ಸ್ವಾಗತಿಸಿ, ಕನ್ನಡ ಶಿಕ್ಷಕರಾದ ಅವಿನಾಶ ಧನ್ಯವಾದವಿತ್ತರು. ಹಿಂದಿ ಭಾಷಾ ಶಿಕ್ಷಕ ವಿ. ಚಂದಪ್ಪ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya

“ದಸ್ಕತ್” ಚಲನಚಿತ್ರಕ್ಕೆ RED FM ತುಳು ಫಿಲ್ಮ್ ಅವಾರ್ಡ್ಸ್‌ನಲ್ಲಿ ಹಲವು ಪ್ರಶಸ್ತಿ

Suddi Udaya

ಮುಂಡಾಜೆ: ಕೃಷಿಕ ಶಾಜಿ ವಾಟೆಪ್ಪಿಳ್ಳಿಲ್ ಹೃದಯಾಘಾತದಿಂದ ನಿಧನ

Suddi Udaya

ಗೇರುಕಟ್ಟೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿಶೇಷ ಚೇತನರ ಬಗ್ಗೆ ಸಂವಾದ ಕಾರ್ಯಕ್ರಮ

Suddi Udaya

ಲಾಯಿಲದ ಹೊಸಕುಮೇರು ನಿವಾಸಿ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಬೂಡುಜಾಲು ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ. 10 ಡಿವಿಡೆಂಟ್

Suddi Udaya
error: Content is protected !!