ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿ ಕ್ಷೇತ್ರದ ಧುರೀಣ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರಿಗೆ ಸನ್ಮಾನ

Suddi Udaya

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯಲ್ಲಿ ಅಳದಂಗಡಿ ಸಿ.ಎ ಬ್ಯಾಂಕಿನ ಮಾಜಿ ಅಧ್ಯಕ್ಷ, ಸಹಕಾರಿ ಕ್ಷೇತ್ರದ ಧುರೀಣ,ಸಾಮಾಜಿಕ,ಧಾರ್ಮಿಕ,ಶೈಕ್ಷಣಿಕ ಕ್ಷೇತ್ರದ ಸಾಧಕ, ಹಿರಿಯರಾದ ಹೆಚ್.ಧರ್ಣಪ್ಪ ಪೂಜಾರಿಯವರನ್ನು ಸಹಕಾರಿ ಕ್ಷೇತ್ರದ ಸಾಧನೆಗಾಗಿ ಸಂಘದ ವತಿಯಿಂದ ಗೌರವಿಸಿ, ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲ,ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು, ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ,ಮಾಜಿ ಅಧ್ಯಕ್ಷ ಸುಭಾಶ್ಚಂದ್ರ ರೈ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,ನಿರ್ದೇಶಕರಾದ ಉಂಗೀಲಬೈಲು,ಗುರುಪ್ರಸಾದ್,ಪ್ರಶಾಂತ್ ಶೆಟ್ಟಿ, ಬಾಲಕೃಷ್ಣ ಪೂಜಾರಿ,ಶಶಿಧರ ಶೆಟ್ಟಿ ಎ,ಧರ್ಣಪ್ಪ,ಕೆಂಪ,ಶ್ರೀಮತಿ ಗುಲಾಬಿ ಎಂ.ಎನ್,ಶ್ರೀಮತಿ ಸುಂದರಿ,ಜಿನ್ನಪ್ಪ ಪೂಜಾರಿ ಉಪಸ್ಥಿತರಿದ್ದರು.

Leave a Comment

error: Content is protected !!