25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಅ.2: ನಾಗರಿಕ ಅಭಿನಂದನಾ ಸಮಿತಿ ವತಿಯಿಂದ ನಿವೃತ್ತ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉಜಿರೆ: ಅಜಿತ್ ನಗರ ನಿವಾಸಿ ವಿಲ್ಫ್ರೆಡ್ ಡಿಸೋಜಾ ನಿಧನ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya

ಅಯೋಧ್ಯೆ ನಗರದ ಶ್ರೀ ರಾಮ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಜ.22ರಂದು ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ”ಶ್ರೀ ರಾಮನಾಮ ತಾರಕ ಮಂತ್ರ ಹೋಮ”

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನಾರಾವಿ ಸಿಎ ಬ್ಯಾಂಕಿಗೆ ಸತತ 5 ವರ್ಷದಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!