25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

ಅಳದಂಗಡಿ:ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸುವಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ರೈತ ಸದಸ್ಯರು ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಮನವಿ ಸಲ್ಲಿಸಿದರು.

ಅಳದಂಗಡಿ ಸಿ.ಎ ಬ್ಯಾಂಕಿನ ಅಧ್ಯಕ್ಷರು ಪ್ರತ್ಯೇಕ ಸಹಕಾರ ಸಂಘ ರಚನೆಗೆ ಬೇಕಾಗುವ ಹಲವಾರು ನಿಯಮಗಳ ಬಗ್ಗೆ ಸಭೆಗೆ ತಿಳಿಸಿದರು. ಬಳಂಜ ,ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಸಹಕಾರಿ ಸಂಘಕ್ಕೆ ಬೇಕಾಗುವ ಎಲ್ಲಾ ನಿಯಮಗಳಿಗೆ ನಾವು ಶಕ್ತರಾಗಿದ್ದೇವೆ ಎಂದು ತಿಳಿಸಿದರು. ಇದರ ಬಗ್ಗೆ ನಿರ್ಣಯ ಕೈಗೊಂಡು 20 ದಿವಸದೊಳಗೆ ನಿರ್ಣಯ ಪತ್ರವನ್ನು ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಪ್ರತ್ಯೇಕ ಕೃಷಿ ಪತ್ತಿನ ಸಹಕಾರಿ ಸಂಘದ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಕರಂಬಾರು: ರಾಷ್ಟ್ರೀಯ ಸ್ವಯಂಸೇವಕ ಸಂಘದಿಂದ ವಿಜಯದಶಮಿ‌ ಉತ್ಸವ

Suddi Udaya

ಮೇ 28: ಮಿತ್ತಬಾಗಿಲು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಶಿಲಾಮಯ ಧ್ವಜಸ್ತಂಭ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯಿಂದ ಜನ ಸಹಭಾಗಿತ್ವದಲ್ಲಿ 8ನೇ ವರ್ಷದ ಮಕರ ಸಂಕ್ರಾಂತಿ ಸಂದರ್ಭ ರಾಜ್ಯಾದ್ಯಂತ 16529 ಶ್ರದ್ದಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ

Suddi Udaya

ಉಜಿರೆ: ಅಭ್ಯಾಸ್ ಪಿ .ಯು ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿಯ ಆಚರಣೆ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ

Suddi Udaya
error: Content is protected !!