25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಕೊಕ್ಕಡ ಶ್ರೀ ಶಿವಶಕ್ತಿ ಭಜನಾ ಮಂದಿರದ ಲೋಕಾರ್ಪಣೆ ಹಾಗೂ ಭಜನೋತ್ಸವ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya

ಎ.17 : ಬೆಳ್ತಂಗಡಿಯಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್‌ ಆ‌ರ್ ಮತಪ್ರಚಾರ:ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ಪತ್ರಿಕಾಗೋಷ್ಠಿ

Suddi Udaya

ಕುದ್ರೋಳಿ‌ ಕ್ಷೇತ್ರದ ನಿರ್ಮಾತೃ ಬಿ.ಜನಾರ್ಧನ ಪೂಜಾರಿಯವರನ್ನು ಭೇಟಿ ಮಾಡಿದ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಸದಸ್ಯರು

Suddi Udaya
error: Content is protected !!