September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ. 344 ಕೋಟಿ ವಾರ್ಷಿಕ ವ್ಯವಹಾರ: 1 ಕೋಟಿ 9 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ. 12.50 ಡಿವಿಡೆಂಟ್ ಘೋಷಣೆ:

ಅಳದಂಗಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಳದಂಗಡಿ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು ಅವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಸ್ವರಾಜ್ ಟವರ್ಸ್ ನ ಶ್ರೀಗುರು ಸಭಾಭವನದಲ್ಲಿ ಸೆ.16 ರಂದು ನಡೆಯಿತು.

ವರದಿ ಸಾಲಿನಲ್ಲಿ ಸಂಘ ತಮ್ಮ ಸದಸ್ಯರಿಗೆ ಹಾಗೂ ಗ್ರಾಹಕರಿಗೆ ಪಡಿತರ ವಿತರಣೆ, ರಾಸಾಯನಿಕ ಗೊಬ್ಬರ,ಅಡುಗೆ ಅನಿಲ ಮತ್ತು ಕ್ರಿಮಿನಾಶಕಗಳನ್ನು ಮಾರಾಟ ಮಾಡಿದೆ. ರೂ 1,00,19003.12 ಖರೀದಿಸಿ ರೂ ,89,72,998.89ರಷ್ಟು ಸೊತ್ತುಗಳನ್ನು ಮಾರಾಟ ಮಾಡಿದೆ.
ಇದರಿಂದ 14,83,501.13 ರಷ್ಟು ವ್ಯಾಪಾರ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಶಿವಭಟ್ ಕಟ್ಟೂರು ತಿಳಿಸಿದರು.

ಈ ಸಾಲಿನಲ್ಲಿ ಒಟ್ಡು ರೂ 3,44,88,44,298.25 ರಷ್ಟು ವಾರ್ಷಿಕ ವ್ಯವಹಾರ ನಡೆಸಿರುತ್ತದೆ.ಈ ಸಾಲಿನಲ್ಲಿ ರೂ.38,05,36,835.45 ಹೆಚ್ಚುವರಿ ವ್ಯವಹಾರ ಆಗಿರುತ್ತದೆ. ಈ ಸಾಲಿನಲ್ಲಿ ಒಟ್ಟು ರೂ.
1,09,42,351.30 ನಿವ್ವಳ ಲಾಭ ಗಳಿಸಿ ಸದಸ್ಯರಿಗೆ 12.50 ಶೇ ಡಿವಿಡೆಂಟ್ ಘೋಷಣೆ ಮಾಡಿದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷ ಸದಾನಂದ ಪೂಜಾರಿ,ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಮೀರಾ,ನಿರ್ದೇಶಕರಾದ ಉಂಗೀಲಬೈಲು,ಹೆಚ್‌.ಧರ್ಣಪ್ಪ ಪೂಜಾರಿ, ಗುರುಪ್ರಸಾದ್,ಪ್ರಶಾಂತ್ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಶಶಿಧರ ಶೆಟ್ಟಿ ಎ, ಧರ್ಣಪ್ಪ,ಕೆಂಪ, ಶ್ರೀಮತಿ ಗುಲಾಬಿ ಎಂ.ಎನ್, ಶ್ರೀಮತಿ ಸುಂದರಿ, ಜಿನ್ನಪ್ಪ ಪೂಜಾರಿ, ವಲಯ ಮೇಲ್ವಿಚಾರಕ ಸಂದೇಶ್ ಉಪಸ್ಥಿತರಿದ್ದರು.

ಮಹಾಸಭೆಗೆ ಹೆಚ್ಚಿನ ಸದಸ್ಯರು ಭಾಗವಹಿಸಿದರು. ಸಂಘದ ಅಭಿವೃದ್ಧಿ ದೃಷ್ಟಿಯಿಂದ ಹಲವಾರು ಆರೋಗ್ಯಕರ ಚರ್ಚೆಗಳು ನಡೆಯಿತು. ಸಂಘದ ಮಾಜಿ ಅಧ್ಯಕ್ಷರುಗಳು,ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಮಾರುತಿ ಸುಜುಕಿ ಶೋರೂಮ್ ನಲ್ಲಿ ನ್ಯೂ ಬ್ರೆಝಾ ಮಾರುಕಟ್ಟೆಗೆ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿ ಸಮಿತಿಯ ಜೊತೆಕಾರ್ಯದರ್ಶಿ ನಝೀರ್ ಸುಣ್ಣಲಡ್ಡ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya
error: Content is protected !!