September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪ್ರಯುಕ್ತ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ಪೆರಿಂಜೆಯ ಉದ್ಯಮಿಗಳಾದ ವಿಕಾಸ್ ಜೈನ್ ಅಧ್ಯಕ್ಷತೆ ವಹಿಸಿ ಶಿಬಿರಕ್ಕೆ ಸರ್ವರ ಸಹಕಾರ ಇರುತ್ತದೆ ಎಂದು ಹೇಳಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ್ ಶೆಟ್ಟಿಯವರು ಶಿಬಿರದ ರೂಪುರೇಷೆ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ
ಕರುಣಾಕರ ಪೂಜಾರಿ , ಪ್ರಗತಿಪರ ಕೃಷಿಕ ವಿದ್ಯಾನಂದ ಜೈನ್ , ಮಾಜಿ ಪಂಚಾಯತ್ ಅಧ್ಯಕ್ಷೆ ಹೇಮಾ ವಸಂತ , ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ , ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಪೂರ್ವ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಮುಂತಾದವರು ಉಪಸ್ಥಿತರಿದ್ದರು.

ಎಸ್.ಡಿ.ಎಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು.
ವಿಜ್ಞಾನ ಶಿಕ್ಷಕ ಹರಿಪ್ರಸಾದ್ ಸ್ವಾಗತಿಸಿದರು. ಗಣಿತ ಶಿಕ್ಷಕ ಸುಧೀರ್ ಕುಮಾರ್ ವಂದಿಸಿದರು.

Related posts

ಆಶುಭಾಷಣ ಸ್ಪರ್ಧೆ: ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜು ವಿದ್ಯಾರ್ಥಿನಿ ಕು.ಸುಮೇಧಾ ಗಾoವ್ಕರ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಪಡಂಗಡಿಯಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಶೊರೀನ್ ರಿಯೂ ಉಜಿರೆ ಹಾಗೂ ಬೆಳ್ತಂಗಡಿ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya
error: Content is protected !!