25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ ಸರ್ ಎಂ. ವಿಶ್ವೇಶ್ವರಯ್ಯನವರು ಎಂದು ಉಜಿರೆಯ ಎಸ್.ಡಿ.ಯಂ. ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಅವರು ನುಡಿದರು.

ಇದೇ ಸಂದರ್ಭದಲ್ಲಿ ಭಾರತದ ಸಂವಿಧಾನ ಸಹಿಷ್ಣುತೆ, ಸಹಬಾಳ್ವೆಗೆ ಎಲ್ಲಾ ನಾಗರಿಕರಿಗೂ ಸಮಾನ ಅವಕಾಶವನ್ನು ನೀಡಿದೆ ಎಂದು ಎಸ್.ಡಿ.ಯಂ. ಪಿ.ಯು ಕಾಲೇಜಿನ ಉಪನ್ಯಾಸಕಿ ಶ್ರೀ ದಿವ್ಯಾ ಕುಮಾರಿ ನುಡಿದರು.

ಅವರು ಇಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ತರಬೇತಿ ಕೇಂದ್ರವು ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು, ಹಿರಿಯ ತರಬೇತಿ ಅಧಿಕಾರಿ ರತ್ನಾಕರ್ ಅವರು ಸ್ವಾಗತಿಸಿದರು.

Related posts

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ರೈತ ದಿನಾಚರಣೆ

Suddi Udaya

ಕೊಲ್ಲಿಯಲ್ಲಿ ಬೃಹತ್ ಸ್ವಚ್ಚತಾ ಅಭಿಯಾನ: ಸ್ವಚ್ಛತೆ ಕಾಪಾಡುವುದು ನಮ್ಮ ಆದ್ಯ ಕರ್ತವ್ಯ: ಭವಾನಿ ಶಂಕರ್

Suddi Udaya

ಶಿಬಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನೀರಚಿಲುಮೆ ನರ್ಸರಿಯ ಮಣ್ಣಿನ ಅಡಿಯಲ್ಲಿ ಬಿಳಿ ಬಣ್ಣದ ಉದ್ದನೆಯ 28 ಮೊಟ್ಟೆಗಳು ಪತ್ತೆ

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya
error: Content is protected !!