23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ ಸರ್ ಎಂ. ವಿಶ್ವೇಶ್ವರಯ್ಯನವರು ಎಂದು ಉಜಿರೆಯ ಎಸ್.ಡಿ.ಯಂ. ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಅವರು ನುಡಿದರು.

ಇದೇ ಸಂದರ್ಭದಲ್ಲಿ ಭಾರತದ ಸಂವಿಧಾನ ಸಹಿಷ್ಣುತೆ, ಸಹಬಾಳ್ವೆಗೆ ಎಲ್ಲಾ ನಾಗರಿಕರಿಗೂ ಸಮಾನ ಅವಕಾಶವನ್ನು ನೀಡಿದೆ ಎಂದು ಎಸ್.ಡಿ.ಯಂ. ಪಿ.ಯು ಕಾಲೇಜಿನ ಉಪನ್ಯಾಸಕಿ ಶ್ರೀ ದಿವ್ಯಾ ಕುಮಾರಿ ನುಡಿದರು.

ಅವರು ಇಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ತರಬೇತಿ ಕೇಂದ್ರವು ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು, ಹಿರಿಯ ತರಬೇತಿ ಅಧಿಕಾರಿ ರತ್ನಾಕರ್ ಅವರು ಸ್ವಾಗತಿಸಿದರು.

Related posts

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಇದರ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ

Suddi Udaya

ಕರಾಯ : ಆಟೋರಿಕ್ಷಾಕ್ಕೆ ಟಿಪ್ಪರ್‌ ಲಾರಿ ಡಿಕ್ಕಿ: ಪುತ್ತೂರು ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಶ್ರೀನಿವಾಸ್ ಡಿ.ಪಿ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಗೆ ಶೇ. 88.2 ಫಲಿತಾಂಶ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya
error: Content is protected !!