25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗಣೇಶ ಚತುರ್ಥಿಗೆ ದ.ಕ ಜಿಲ್ಲೆಯಲ್ಲಿ ಸೆ.19 ರಂದು ಸರ್ಕಾರಿ ರಜೆ : ಜಿಲ್ಲಾಧಿಕಾರಿ ಆದೇಶ

ಬೆಳ್ತಂಗಡಿ, : ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ಚೌತಿ ಹಬ್ಬಕ್ಕೆ ಸೆ.18ರ ಬದಲಿಗೆ ಸೆ.19 ರಂದು ಸಾರ್ವತ್ರಿಕ ರಜೆ ಘೋಷಿಸಲಾಗಿದೆ.

ಸೆ.19ರಂದು ಚೌತಿ ಹಬ್ಬ ಆಚರಿಸುವುದರಿಂದ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಮನವಿಯ ಮೇರೆಗೆ ಸೆ.19ರಂದು ರಜೆ ಘೋಷಣೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ದ.ಕ. ಜಿಲ್ಲಾಧಿಕಾರಿಗೆ ನಿರ್ದೇಶನ ನೀಡಿದ್ದರು.

ಇದೀಗ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಗೆ ಅನ್ವಯಿಸುವಂತೆ ಗಣೇಶ ಚತುರ್ಥಿ ಹಬ್ಬದ ರಜೆಯನ್ನು ಸ್ಥಳೀಯ ಪರಿಸ್ಥಿತಿಗಳಿಗನುಸಾರವಾಗಿ ಸೆ.18ರ ಬದಲಿಗೆ ಸೆ.19ರಂದು ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಪಿ. ನಾಗಪ್ರಶಾಂತ್ ನಿರ್ದೇಶಿಸಿದ್ದಾರೆ.


Related posts

ಸೌತಡ್ಕ: ‘ಜ್ಯೋತಿ’ ಜ್ಞಾನ ವಿಕಾಸ ಕೇಂದ್ರದ ಉದ್ಘಾಟನೆ ಕಾರ್ಯಕ್ರಮ

Suddi Udaya

ಯೋಗಾಸನ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ, ಅಕ್ಕಮ್ಮ ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

Suddi Udaya

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

Suddi Udaya
error: Content is protected !!