22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ಬೆಳ್ತಂಗಡಿ ಟೈಲರ್ ಅಸೋಸಿಯೇಷನ್ ಹಾಗೂ ಸಂದೀಪ್ ಕ್ರಿಯೇಶನ್ ರವರ ‘ಭರವಸೆಯ ಸೂಜಿದಾರ’ ಕಿರುಚಿತ್ರಕ್ಕೆ ಮುಹೂರ್ತ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಗುರುವಾಯನಕೆರೆ – ‘ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ-

Suddi Udaya

ಕೊಕ್ಕಡ: ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ “ಶ್ರೀ ಲಲಿತಾ ಸಹಸ್ರನಾಮ ಯಾಗ: ಧಾರ್ಮಿಕ ಸಭೆ, ಸನ್ಮಾನ

Suddi Udaya

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
error: Content is protected !!