July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಉಜಿರೆ ಕಾಲೇಜಿನ ವಿದ್ಯಾರ್ಥಿ ವಿನುತಾ ಆರ್. ನಾಯ್ಕ್ ಆಯ್ಕೆ

Suddi Udaya

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya

ಗುರುವಾಯನಕೆರೆ ಹಿ.ಪ್ರಾ ಶಾಲಾ ಮತಗಟ್ಟೆಯಲ್ಲಿ ಬಿರುಸಿನ ಮತದಾನ

Suddi Udaya

ಬೆಳ್ತಂಗಡಿ ಗ್ರಂಥಾಲಯ ಸಪ್ತಾಹ ಉದ್ಘಾಟನೆ

Suddi Udaya
error: Content is protected !!