23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya

ಮುಂಡಾಜೆ : ಸಂವಿಧಾನ ಜಾಗೃತಿ ಜಾಥಾ

Suddi Udaya

ಗೋವಿಂದೂರು ಮಿತ್ರ ಬಳಗದ ಸದಸ್ಯರಿಂದ ಪಾರೆಂಕಿ ಅಭಿಲಾಷ್ ರವರಿಗೆ ಆರ್ಥಿಕ ನೆರವು

Suddi Udaya

ಸಿಇಟಿ ಫಲಿತಾಂಶ : ಎಕ್ಸಲೆಂಟ್ ಮೂಡುಬಿದಿರೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ರ‍್ಯಾಂಕ್

Suddi Udaya

ಗಾಳಿ ಮಳೆಯಿಂದ ಹಾನಿಗೊಳಗಾದ ತೆಕ್ಕಾರು ಬೇಬಿ ಪೂಜಾರ್ತಿರವರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ವೈಯಕ್ತಿಕ ಸಹಾಯ

Suddi Udaya

ಜಿಲ್ಲಾಮಟ್ಟದ ಪ್ರತಿಭಾ ಕಾರಂಜಿ ಕನ್ನಡ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ. ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ ಸ್ಥಾನ

Suddi Udaya
error: Content is protected !!