ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ವಿಶೇಷ ಸಭೆ

Suddi Udaya

ಬೆಳಾಲು ನಿವೃತ್ತ ಶಿಕ್ಷಕನ ಬರ್ಬರ ಕೊಲೆ ಪ್ರಕರಣ: ಸ್ಥಳಕ್ಕೆ ಎಸ್ಪಿ ಸೇರಿದಂತೆ ವಿವಿಧ ತಂಡದಿಂದ ತನಿಖೆ

Suddi Udaya

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಎಸ್.ವೈ.ಎಸ್ ಬೆಳ್ತಂಗಡಿ ಝೋನ್ ಮಾದರಿ ಮದುವೆ ಪ್ರಯುಕ್ತ ಡಿ.12 ರಂದು ಜಮಾಅತ್ ಪ್ರತಿನಿಧಿ ಸಂಗಮ

Suddi Udaya

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ತೀರ್ಥಕ್ಷೇತ್ರದಲ್ಲಿ ದಿ| ಉದಯಕುಮಾರ್ ಸ್ಮರಣಾರ್ಥ “ಸೂರ್ಯೋದಯ” ಕೃತಿ ಬಿಡುಗಡೆ

Suddi Udaya

ಕಳಿಯ : ಸಂಬೋಳ್ಯ ನಿವಾಸಿ ಸುಂದರ ನಾಯ್ಕ ನಿಧನ

Suddi Udaya
error: Content is protected !!