ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

Suddi Udaya

ಅಳದಂಗಡಿ:ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸುವಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ರೈತ ಸದಸ್ಯರು ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಮನವಿ ಸಲ್ಲಿಸಿದರು.

ಅಳದಂಗಡಿ ಸಿ.ಎ ಬ್ಯಾಂಕಿನ ಅಧ್ಯಕ್ಷರು ಪ್ರತ್ಯೇಕ ಸಹಕಾರ ಸಂಘ ರಚನೆಗೆ ಬೇಕಾಗುವ ಹಲವಾರು ನಿಯಮಗಳ ಬಗ್ಗೆ ಸಭೆಗೆ ತಿಳಿಸಿದರು. ಬಳಂಜ ,ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಸಹಕಾರಿ ಸಂಘಕ್ಕೆ ಬೇಕಾಗುವ ಎಲ್ಲಾ ನಿಯಮಗಳಿಗೆ ನಾವು ಶಕ್ತರಾಗಿದ್ದೇವೆ ಎಂದು ತಿಳಿಸಿದರು. ಇದರ ಬಗ್ಗೆ ನಿರ್ಣಯ ಕೈಗೊಂಡು 20 ದಿವಸದೊಳಗೆ ನಿರ್ಣಯ ಪತ್ರವನ್ನು ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಪ್ರತ್ಯೇಕ ಕೃಷಿ ಪತ್ತಿನ ಸಹಕಾರಿ ಸಂಘದ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Leave a Comment

error: Content is protected !!