25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳನ್ನು ಸೆ.15 ರಂದು ಭೇಟಿಯಾಗಿ ಮುಕ್ತ ಚರ್ಚೆಯನ್ನು ನಡೆಸಿದರು.


ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಗಮಿಸಿದ್ದರು.
ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಅವರು ಸಮಾರೋಪ ಭಾಷಣ ಮಾಡಿದರು.


ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಕುವೆಟ್ಟು ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಕುವೆಟ್ಟು ಬ್ಲಾಕ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಆಸೀಫ್ ಬಂಗೇರುಕಟ್ಟೆ ಧನ್ಯವಾದಗೈದರು.

Related posts

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಪದ್ಮುಂಜದಲ್ಲಿ 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರದ ಸಮಾರೋಪ: ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಸಾಧಕಿ ಕುಮಾರಿ ಅದಿತಿ ಮುಗೆರೋಡಿ ರವರಿಗೆ ಸನ್ಮಾನ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ನಿರಂಜನ್ ಬಾವಂತಬೆಟ್ಟು ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಪುದುವೆಟ್ಟು ಶ್ರೀ.ಧ.ಮಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

 ನಕ್ಸಲ್ ಚಳವಳಿಯ ಕೊನೆಯ ವ್ಯಕ್ತಿ ನಕ್ಸಲ್ ರವೀಂದ್ರ ಶರಣಾಗತಿ

Suddi Udaya
error: Content is protected !!