24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಉಜಿರೆ: ವಿವೇಕಾನಂದನಗರ ಶ್ರೀ ಸರಸ್ವತಿ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಚಾರ್ಮಾಡಿ: ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಉದ್ಘೋಷ’ ಪತ್ರಿಕೆ ಬಿಡುಗಡೆ ಕಾರ್ಯಕ್ರಮ

Suddi Udaya

ಮರೋಡಿ:ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಕ್ರೀಡಾಂಗಣ ಉದ್ಘಾಟನೆ

Suddi Udaya

ಅರಸಿನಮಕ್ಕಿಯಿಂದ ಶಿಶಿಲ ರಸ್ತೆ ಬದಿಯಲ್ಲಿರುವ ಅಪಾಯಕಾರಿ ವಿದ್ಯುತ್ ಕಂಬಗಳ ತೆರವು

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!