September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೌಷ್ಠಿಕ ಆಹಾರ ಸಪ್ತಾಹ

ಶಿಬರಾಜೆ: ಇಲ್ಲಿನ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ ಅಂಗವಾಗಿ ಪೌಷ್ಠಿಕ ಆಹಾರ ಸಪ್ತಾಹ ಕಾರ್ಯಕ್ರಮವು ಸೆ.15ರಂದು ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಅಪೌಷ್ಠಿಕತೆ ಬಗ್ಗೆ, ಪೌಷ್ಠಿಕ ಆಹಾರಗಳ ವಿಧಗಳ ಬಗ್ಗೆ ಮತ್ತು ಅವುಗಳ ಸೇವನೆಯಲ್ಲಿ ಮಕ್ಕಳ ಮನ ಒಲಿಸುವ ಪೋಷಕರ ಪಾತ್ರದ ಬಗ್ಗೆ ಸಿಹೆಚ್‌ಒ ನಿಖಿತಾ, ಕಿರಿಯ ಆರೋಗ್ಯ ಸಹಾಯಕಿ ಶ್ರೀಮತಿ ರೇಖಾ, ಕಳೆಂಜ ಗ್ರಾ.ಪಂ ಸದಸ್ಯರು ಹಾಗೂ ಶಾಲಾ ಬಾಲವಿಕಾಸ ಸಮಿತಿಯ ಸದಸ್ಯರಾದ ಜೆ.ಎಸ್ ನಿತ್ಯಾನಂದ ರೈ, ಆಶಾ ಕಾರ್ಯಕರ್ತೆ ಪುಷ್ಪಾ ಮಾಹಿತಿಯನ್ನು ತಿಳಿಸಿಕೊಟ್ಟರು. ಮಕ್ಕಳ ಪೋಷಕರು ಮನೆಯಲ್ಲೇ ತಯಾರಿಸಿ ತಂದಂತಹ ಪೌಷ್ಠಿಕ ಆಹಾರವನ್ನು ಎಲ್ಲರೂ ಸವಿದರು.


ಆಶಾ ಕಾರ್ಯಕರ್ತೆ ಶ್ರೀಮತಿ ಪ್ರಿಯಾ ಕಾರ್ಯಕ್ರಮ ನಿರೂಪಿಸಿದರು. ಶಾಲಾ ಸಹಾಯಕಿ ಅನ್ಸಿಲ್ಲಾ ರೋಶ್ನಿ ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ಸಹಕರಿಸಿದರು.

Related posts

ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್ ಪದವಿ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ವೇಣೂರು: 26ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ; ಅಧ್ಯಕ್ಷರಾಗಿ ಜಗದೀಶ್ ಭಟ್ , ಕಾರ್ಯದರ್ಶಿಯಾಗಿ ಪಿ. ಪ್ರಶಾಂತ್ ಹೆಬ್ಬಾರ್

Suddi Udaya

ಕಳೆಂಜ: ರಾಮಣ್ಣ ಗೌಡ ಬರೆಂಗಾಯ ನಿಧನ

Suddi Udaya

ಸೌತಡ್ಕ ಬಯಲು ಗಣಪತಿ ದೇವಸ್ಥಾನಕ್ಕೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಭೇಟಿ

Suddi Udaya

ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಅಂಬೇಡ್ಕರ್ ದಿನಾಚರಣೆ

Suddi Udaya
error: Content is protected !!