22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ನವೀನ್ ಕೆ. ಸಾಮಾನಿಯವರ ಅಧ್ಯಕ್ಷತೆಯಲ್ಲಿ ನವೋದಯ ಸಭಾಭವನದಲ್ಲಿ ಸೆ. 16 ರಂದು ಪಡೆಯಿತು.

ಸಂಘವು ವರದಿ‌ ಸಾಲಿನಲ್ಲಿ 150 ಕೋಟಿ ವ್ಯವಹಾರ ನಡೆಸಿ ಸುಮಾರು 69 ಲಕ್ಷ ನಿವ್ವಳ ಲಾಭ ಗಳಿಸಿದೆ. ಜೊತೆಗೆ ಸಂಘವು ಸಮಾಜದ ಸಂಕಷ್ಟಗಳಿಗೆ ಸ್ಪಂದಿಸುತ್ತಿದ್ದು ಈ ವರ್ಷ ಮೃತಪಟ್ಟ ರೈತ ಸದಸ್ಯರ ಕುಟುಂಬಕ್ಕೆ ರೂ 37 ಸಾವಿರ ಸಹಾಯಧನ ನೀಡಲಾಗಿದೆ ಎಂದು ಸಂಘದ ಅಧ್ಯಕ್ಷ ನವೀನ್ ಕೆ ಸಾಮಾನಿ ಹೇಳಿದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ತಾರಾನಾಥ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಮ್ಮಾಜಿ ಕೋಟ್ಯಾನ್,ಕೆ.ನಾರಾಯಣ ರಾವ್,ಆನಂದ ಸಾಲಿಯಾನ್, ಶ್ರೀಮತಿ ಸುಮಿತ್ರಾ ಬಿ ಹೆಗ್ಡೆ,ಶ್ರೀಮತಿ ಮಲ್ಲಿಕಾ,ಶಿವಪ್ಪ ಪೂಜಾರಿ, ರಾಮ ಬಂಗೇರಾ, ಅಶೋಧರ ಎನ್,ಶೀನಪ್ಪ ಎಂ,ಶ್ರೀಮತಿ ಸುಶೀಲಾ, ಸುಧೀರ್ ಪಿ ಯಚ್, ನಿತ್ಯಾನಂದ ಶೆಟ್ಟಿ, ವಲಯ ಮೇಲ್ವಿಚಾರಕ ಸಂದೇಶ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಹಿರಿಯ ಠೇವಣಿದಾರರಾದ ನೇಮು, ಹಿರಿಯ ಸದಸ್ಯರಾದ ಕೃಷ್ಣಪ್ಪ ಮೂಲ್ಯ,ಪೂವಪ್ಪ ನಾಯ್ಕ,ಪಿ.ಎಂ ಸನ್ನಿ,ಕೇಶವ ಮಡಿವಾಳ,ತಿಮ್ಮಯ್ಯ ಆಚಾರ್ಯ,ಅಣ್ಣು ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

Related posts

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆಧಾರ್ ಸೀಡಿಂಗ್” ಕ್ಯಾಂಪ್

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಧರ್ಮಸ್ಥಳ ಗ್ರಾ.ಪಂ. ಮಾಜಿ ಸದಸ್ಯ ಗೋಪಾಲ ಪೂಜಾರಿ ನಿಧನ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಗ್ರಾಮೀಣ ಜೀವನೋಪಾಯ ಮತ್ತು ಸುಸ್ಥಿರತೆ: ಜಾಗತಿಕ ದೃಷ್ಟಿಕೋನ’ ಕುರಿತ ಎರಡು ದಿನದ ಅಂತಾರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನೆ

Suddi Udaya
error: Content is protected !!