38.6 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು ನೇತ್ರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಗಣಿ ಮತ್ತು ಭೂವಿಜ್ಞಾನ ಅಧಿಕಾರಿಗಳಿಂದ ದಾಳಿ: ಸುಮಾರು 48 ಟನ್ ನಷ್ಟು ಅಕ್ರಮ ಮರಳು ವಶ: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಸುಮಾರು ರೂ. 33600 ಮೌಲ್ಯದ ಸುಮಾರು 48 ಟನ್‌ ನಷ್ಟು ಮರಳನ್ನು ವಶಪಡಿಸಿಕೊಂಡ ಪ್ರಕರಣ ಸೆ. 15ರಂದು ವರದಿಯಾಗಿದೆ.


ಉರುವಾಲು ನಿವಾಸಿಯಾದ ಸಂದೇಶ್‌ ಎಂಬಾತನು ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕು, ಬಂದಾರು ಗ್ರಾಮದ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ, ಸರಕಾರಕ್ಕೆ ಯಾವುದೇ ರಾಜಸ್ವ ಪಾವತಿಸದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿದ್ದು ಈ ಬಗ್ಗೆ ಮಾಹಿತಿ ಬಂದ ಮೇರೆಗೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯಲ್ಲಿ ಭೂ ವಿಜ್ಞಾನಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಲಾಯಲ್‌ ಗ್ಲಾಡ್ಸನ್ಸ್ ಮಿರಾಂಡ ರವರು, ಸೆ.15 ರಂದು ಬೆಳಿಗ್ಗೆ ಬಂದಾರು ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿ ಮತ್ತು ಬೆಳ್ತಂಗಡಿ ಕಂದಾಯ ನಿರೀಕ್ಷಕರೊಂದಿಗೆ ಸದರಿ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಆರೋಪಿಯು ಸುಮಾರು ರೂ. 33600/ ಮೌಲ್ಯದ ಸುಮಾರು 48 ಟನ್‌ ನಷ್ಟು ಮರಳನ್ನು ಕಳವು ಮಾಡಿ ಅಕ್ರಮವಾಗಿ ದಾಸ್ತಾನು ಹಾಕಿರುವುದು ಕಂಡುಬಂದಿರುತ್ತದೆ ಎಂಬುದಾಗಿ ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 66/2023 ಕಲಂ: 379 ಐಪಿಸಿ ಯಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಜಯ; ಹಗಲಿರುಳು ದುಡಿದ ಕಾರ್ಯಕರ್ತರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಡಾ| ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನೋತ್ಸವ ಮತ್ತು ಶಿಕ್ಷಕರ ದಿನಾಚರಣೆ: 23 ಮಂದಿ ನಿವೃತ್ತ ಶಿಕ್ಷಕರಿಗೆ ಸನ್ಮಾನ; ದತ್ತಿನಿಧಿ ಸಮರ್ಪಣೆ

Suddi Udaya

ವಿದ್ವತ್ ಪಿ.ಯು. ಕಾಲೇಜಿನಲ್ಲಿ ಗಾಂಧಿಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಜನ್ಮದಿನಾಚರಣೆ

Suddi Udaya

ಗುರುವಾಯನಕೆರೆ: ನಾಗರಿಕ ಸೇವಾ ಟ್ರಸ್ಟ್‌ನ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಎಸ್.ಡಿ.ಪಿ.ಐ. ಅಭ್ಯರ್ಥಿ ಅಕ್ಬರ್ ನಾಮಪತ್ರ ಸಲ್ಲಿಕೆ

Suddi Udaya

ಮಾಜಿ ಶಾಸಕ ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮಾಜಿ ಸೈನಿಕರ ಸಂಘದಿಂದ ಸಂತಾಪ

Suddi Udaya
error: Content is protected !!