ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ನಿಡ್ಲೆ : ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.16 ರಂದು ಸಂಘದ ಸಭಾಂಗಣದಲ್ಲಿ ಜರುಗಿತು.

ಸಂಘದ ಅಧ್ಯಕ್ಷ ರಮೇಶ್ ರಾವ್ ಕೆ ಅಧ್ಯಕ್ಷತೆ ವಹಿಸಿ, ವಾರ್ಷಿಕ ವರದಿ ಮಂಡಿಸಿದರು.

ಕಾರ್ಯಕ್ರಮದಲ್ಲಿ ಯೋಧ ಕೆ. ಮಹಾಬಲ ಮುದ್ದಿಗೆ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪದ್ಮನಾಭ , ಉಪಾಧ್ಯಕ್ಷ ರುಕ್ಮಯ್ಯ ಪೂಜಾರಿ, ನಿರ್ದೇಶಕರುಗಳಾದ ಅಶೋಕ್ ಭಟ್, ಸಬಾಸ್ಟಿನ್ ಪಿ.ಟಿ, ಡೀಕಯ್ಯ ಎಂ. ಕೆ, ನಿತ್ಯಾನಂದ ರೈ ಟಿ.ಎಸ್, ನಾರಾಯಣ ಕೆ, ಶ್ರೀಮತಿ ವಿಜಯಲಕ್ಷ್ಮೀ, ಶ್ರೀಮತಿ ಐಶ್ವರ್ಯ ಶೆಟ್ಟಿ ಜೆ, ಕೆಂಪಯ್ಯ ಗೌಡ ಎನ್, ರಾಜು, ಪದ್ಮನಾಭ ಕೆ, ಸಿರಾಜುದ್ದೀನ್ ಉಪಸ್ಥಿತರಿದ್ದರು.

ಸನ್ಮಾನ ಪತ್ರವನ್ನು ನಿರ್ದೇಶಕ ನಿತ್ಯಾನಂದ ರೈ ಓದಿದರು.

ಗಾಯತ್ರಿ ಹೆಚ್. ಗೌಡ ಪ್ರಾರ್ಥಿಸಿ, ನಿರ್ದೇಶಕ ಸಬಾಸ್ಟಿನ್ ಪಿ.ಟಿ ಸ್ವಾಗತಿಸಿ, ನಿರೂಪಿಸಿದರು.

Leave a Comment

error: Content is protected !!