September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪ್ರಯುಕ್ತ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಮಾಲೋಚನಾ ಸಭೆ ನಡೆಯಿತು.

ಪೆರಿಂಜೆಯ ಉದ್ಯಮಿಗಳಾದ ವಿಕಾಸ್ ಜೈನ್ ಅಧ್ಯಕ್ಷತೆ ವಹಿಸಿ ಶಿಬಿರಕ್ಕೆ ಸರ್ವರ ಸಹಕಾರ ಇರುತ್ತದೆ ಎಂದು ಹೇಳಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಬಿ.ಸೋಮಶೇಖರ್ ಶೆಟ್ಟಿಯವರು ಶಿಬಿರದ ರೂಪುರೇಷೆ ಬಗ್ಗೆ ಮಾತನಾಡಿದರು.

ಸಭೆಯಲ್ಲಿ ಹೊಸಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಗದೀಶ್ ಹೆಗ್ಡೆ , ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ
ಕರುಣಾಕರ ಪೂಜಾರಿ , ಪ್ರಗತಿಪರ ಕೃಷಿಕ ವಿದ್ಯಾನಂದ ಜೈನ್ , ಮಾಜಿ ಪಂಚಾಯತ್ ಅಧ್ಯಕ್ಷೆ ಹೇಮಾ ವಸಂತ , ಶಾಲಾ ಮುಖ್ಯೋಪಾಧ್ಯಾಯರಾದ ಮುಕುಂದಚಂದ್ರ , ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಪೂರ್ವ ಸಹ ಯೋಜನಾಧಿಕಾರಿ ಚೇತನಾ ಕುಮಾರಿ ಮುಂತಾದವರು ಉಪಸ್ಥಿತರಿದ್ದರು.

ಎಸ್.ಡಿ.ಎಂ ಪ.ಪೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಪ್ರಾಸ್ತಾವಿಕ ಮಾತನಾಡಿದರು.
ವಿಜ್ಞಾನ ಶಿಕ್ಷಕ ಹರಿಪ್ರಸಾದ್ ಸ್ವಾಗತಿಸಿದರು. ಗಣಿತ ಶಿಕ್ಷಕ ಸುಧೀರ್ ಕುಮಾರ್ ವಂದಿಸಿದರು.

Related posts

ಪೆರಾಡಿ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಶ್ರೀ ಗು.ನಾ.ಸ್ವಾ. ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಕುವೆಟ್ಟು- ಓಡಿಲ್ನಾಳ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ಕೂಟ

Suddi Udaya

ನಿಡ್ಲೆ: ಸರಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿ: ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯ

Suddi Udaya

ತಣ್ಣೀರುಪಂತ: ಅಳಕೆ ಎಂಬಲ್ಲಿ ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವೃದ್ಧ ಸಾವು : ಕೊಲೆಯೇ, ಆತ್ಮಹತ್ಯೆಯೇ ಪೊಲೀಸರ ತನಿಖೆ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ಎನ್.ಎ.ಬಿ.ಹೆಚ್ ರಾಷ್ಟ್ರೀಯ ಮಾನ್ಯತೆ ಘೋಷಣೆ: ಬಿರ್ಲಾ ಫರ್ಟಿಲಿಟಿ ಮತ್ತು ಐವಿಎಫ್ ಸೆಂಟರ್ ಉದ್ಘಾಟನೆ, ನವೀಕೃತ ಸುಧಾರಿತ ಪ್ರಯೋಗಾಲಯ ಉದ್ಘಾಟನೆ

Suddi Udaya
error: Content is protected !!