September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ಉಜಿರೆ: ತಂತ್ರಜ್ಞಾನವು ಇಂದಿನ ಜನಜೀವನದಲ್ಲಿ ಹಾಸುಹೊಕ್ಕಾಗಿದೆ. ಇಂದಿನ ಈ ಬೆಳವಣಿಗೆಗೆ ಸರ್ ಎಂ. ವಿಶ್ವೇಶ್ವರಯ್ಯನವರಂತಹ ಮಹಾನ್ ತಂತ್ರಜ್ಞರು ಹಾಕಿಕೊಟ್ಟ ಭದ್ರವಾದ ಬುನಾದಿ ಮತ್ತು ದೂರದೃಷ್ಟಿಯ ಯೋಜನೆಗಳು ಸಹಕಾರಿಯಾಗಿವೆ. ಮಾನವ ಸಮಾಜಕ್ಕೆ ನಾನಾ ಕೊಡುಗೆಗಳನ್ನು ನೀಡಿದ ವಿಶ್ವ ಕಂಡ ಶ್ರೇಷ್ಠ ವ್ಯಕ್ತಿ ಸರ್ ಎಂ. ವಿಶ್ವೇಶ್ವರಯ್ಯನವರು ಎಂದು ಉಜಿರೆಯ ಎಸ್.ಡಿ.ಯಂ. ಇಂಜಿನಿಯರಿಂಗ್ ಕಾಲೇಜಿನ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ಅವರು ನುಡಿದರು.

ಇದೇ ಸಂದರ್ಭದಲ್ಲಿ ಭಾರತದ ಸಂವಿಧಾನ ಸಹಿಷ್ಣುತೆ, ಸಹಬಾಳ್ವೆಗೆ ಎಲ್ಲಾ ನಾಗರಿಕರಿಗೂ ಸಮಾನ ಅವಕಾಶವನ್ನು ನೀಡಿದೆ ಎಂದು ಎಸ್.ಡಿ.ಯಂ. ಪಿ.ಯು ಕಾಲೇಜಿನ ಉಪನ್ಯಾಸಕಿ ಶ್ರೀ ದಿವ್ಯಾ ಕುಮಾರಿ ನುಡಿದರು.

ಅವರು ಇಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ತರಬೇತಿ ಕೇಂದ್ರವು ಆಯೋಜಿಸಿದ್ದ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸವನ್ನು ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ವಹಿಸಿದ್ದು, ಹಿರಿಯ ತರಬೇತಿ ಅಧಿಕಾರಿ ರತ್ನಾಕರ್ ಅವರು ಸ್ವಾಗತಿಸಿದರು.

Related posts

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಅಂಡಿಂಜೆ ನಿಸರ್ಗ ಸಂಜೀವಿನಿ ಒಕ್ಕೂಟದಲ್ಲಿ ಸ್ವಉದ್ಯೋಗ ಆರಿವರ್ಕ್ ತರಬೇತಿ ಕಾರ್ಯಗಾರ ಉದ್ಘಾಟನೆ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya

ಬಂದಾರು : ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಉಗ್ರಾಣ ಹಾಗೂ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳಾಲು: ಅನoತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya
error: Content is protected !!