25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಜಠರ ಮತ್ತು ಪಿತ್ತಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿರುವ ಕಾಶಿಪಟ್ಣದ ದೀಪಕ್ ಕೆ ಸಾಲ್ಯಾನ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಬೆಳ್ತಂಗಡಿಯ ಮೂರು ವಕೀಲರ ಕಚೇರಿಗೆ, ಒಂದು ಇಂಜಿನಿಯರ್ ಆಫೀಸ್‌ಗೆ ಕುಂಕುಮ ?

Suddi Udaya

ಗುರುವಾಯನಕೆರೆ – ಉಪ್ಪಿನಂಗಡಿ ಮುಖ್ಯ ರಸ್ತೆಯ ಕುಲಾಲ ಮಂದಿರದ ಬಳಿ ಬೃಹತ್ ಮರಗಳು ರಸ್ತೆಯ ಅಂಚಿನಲ್ಲಿದ್ದು ತೆರವುಗೊಳಿಸುವಂತೆ ಹರೀಶ್ ಕಾರಿಂಜ ಒತ್ತಾಯ

Suddi Udaya

ರೈಲಿನ ಬೋಗಿಯಲ್ಲಿ ಅನ್ನಪೂರ್ಣ ರಾನಡೆಯವರ ಕೊಲೆ ಪ್ರಕರಣ: ತನಿಖೆಗೆ ಒತ್ತಾಯಿಸಿ ಮನವಿ ಸಲ್ಲಿಕೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಮಡಂತ್ಯಾರು ಗ್ರಾ.ಪಂ ನಿಂದ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯೆಡೆಗೆ , ಮತ್ತು ಮನೆ ಮನೆ ಜಾಥಾ ಅಭಿಯಾನದಡಿ ಕರಪತ್ರ ವಿತರಣೆ

Suddi Udaya
error: Content is protected !!