ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು: ರಾಮನಗರ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ

ನಾಲ್ಕೂರು: ಪೋಷಣಾ ಅಭಿಯಾನ ಯೋಜನೆಯಡಿ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದಲ್ಲಿ ಸೆ. 16 ರಂದು ಹಮ್ಮಿಕೊಳ್ಳಲಾಯಿತು.

ರಾಮನಗರ ಬಾಲವಿಕಾಸ ಅಂಗನವಾಡಿ ಕೇಂದ್ರದ ಅಧ್ಯಕ್ಷೆ ಲೀಲಾರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಗುಲಾಬಿ ಎ. ಪೋಷಣ್ ಮಾಸಾಚರಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿ ಎಲ್ಲರೂ ಪೌಷ್ಟಿಕ ಆಹಾರ ಪದ್ಧತಿಯನ್ನು ಪಾಲಿಸುವುದರಿಂದ, ದೈಹಿಕ ಮತ್ತು ಬೌದ್ಧಿಕ ಬೆಳವಣಿಗೆ ಸರಿಯಾಗಿ ಆಗುತ್ತದೆ ಎಂದರು.

ಆರೋಗ್ಯ ಕಾರ್ಯಕರ್ತೆ ಮಮತಾ ಗರ್ಭಿಣಿ, ಬಾಣಂತಿಯರು ಸೇವಿಸಬೇಕಾದ ಆಹಾರ ಪದ್ಧತಿ, ಆರೈಕೆ ಕ್ರಮಗಳ ಬಗ್ಗೆ ತಿಳಿಸಿದರು.

ಸಮುದಾಯ ಆರೋಗ್ಯ ಅಧಿಕಾರಿ ಚೈತ್ರಾ, ಗ್ರಾಮಸ್ಥರಾದ ವಾಸು ಪೂಜಾರಿ ಉಪಸ್ಥಿತರಿದ್ದು ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ತಾಯಂದಿರು, ಆಶಾ ಕಾರ್ಯಕರ್ತೆಯರು, ಗ್ರಾಮ ಮಟ್ಟದ ಅಂಗನವಾಡಿ ಕಾರ್ಯಕರ್ತೆಯರು ಪಾಲ್ಗೊಂಡಿದರು.

ಪುಟಾಣಿ ಮಕ್ಕಳ ಪ್ರಾರ್ಥನೆ ಹಾಡಿದರು. ಅಂಗನವಾಡಿ ಕಾರ್ಯಕರ್ತೆ ಗೀತಾ ಸ್ವಾಗತಿಸಿದರು. ಪುಷ್ಪಲತಾ ವಂದಿಸಿದರು. ವಸುಂಧರಾ ಕಾರ್ಯಕ್ರಮ ನಿರೂಪಿಸಿದರು.ಅಂಗನವಾಡಿ ಸಹಾಯಕಿ ನಳಿನಿ ಸಹಕರಿಸಿದರು.

Related posts

ಮಧ್ವ ಯಕ್ಷಕೂಟ ವತಿಯಿಂದ ನವರಾತ್ರಿ ಪ್ರಯುಕ್ತ ಕೊಲ್ಪೆದಬೈಲಿ ನಲ್ಲಿ ಯಕ್ಷಗಾನ ತಾಳಮದ್ದಳೆ:  ಯಕ್ಷಗಾನಕ್ಕೆ ಪ್ರೋತ್ಸಾಹ ಅಗತ್ಯ:ಡಾ. ಸುಬ್ರಹ್ಮಣ್ಯ ಬಲ್ಲಾಳ್

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಭಾರಿ ಮಳೆಗೆ ಓಡದಕರಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಒಳಗೆ ಹಾಗೂ ಮನೆಗೆ ನುಗ್ಗಿದ ನೀರು

Suddi Udaya

ಕೊಯ್ಯೂರು: ಹರ್ಪಳ ಹಾಗೂ ಅಡ್ಯಾಲು ನಲ್ಲಿ ಕಾಲುಸಂಕಗಳ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya

ಮಹಾರಾಷ್ಟ್ರದ ಕಂಪ್ಟೀಯಲ್ಲಿ ನಡೆದ ಅಖಿಲ ಭಾರತ ಮಟ್ಟದ ಎನ್‌ಸಿಸಿ ತರಬೇತಿಯಲ್ಲಿ ಮಡಂತ್ಯಾರ್‌ನ ಸೇಕ್ರೆಡ್ ಹಾರ್ಟ್ ಕನ್ನಡ ಮಾಧ್ಯಮ ಪ್ರೌಢ ಶಾಲೆಯ ಎನ್‌ಸಿಸಿ ಅಧಿಕಾರಿ ಸಂಜೀತ್ ಶೆಟ್ಟಿಯವರಿಗೆ ಪ್ರಥಮ ಸ್ಥಾನ

Suddi Udaya
error: Content is protected !!