April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರ ಬೇಡಿಕೆ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರತ್ಯೇಕ ಸೊಸೈಟಿ ರಚನೆಗೆ ನಿರ್ಣಯ

ಅಳದಂಗಡಿ:ಬಳಂಜದಲ್ಲಿ ಪ್ರತ್ಯೇಕ ಕೃಷಿ ಪತ್ತಿನ ಸಹಕಾರ ಸಂಘ ಸ್ಥಾಪಿಸುವಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು ಗ್ರಾಮದ ರೈತ ಸದಸ್ಯರು ಅಳದಂಗಡಿ ಸಿಎ ಬ್ಯಾಂಕಿನ ಮಹಾಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಮನವಿ ಸಲ್ಲಿಸಿದರು.

ಅಳದಂಗಡಿ ಸಿ.ಎ ಬ್ಯಾಂಕಿನ ಅಧ್ಯಕ್ಷರು ಪ್ರತ್ಯೇಕ ಸಹಕಾರ ಸಂಘ ರಚನೆಗೆ ಬೇಕಾಗುವ ಹಲವಾರು ನಿಯಮಗಳ ಬಗ್ಗೆ ಸಭೆಗೆ ತಿಳಿಸಿದರು. ಬಳಂಜ ,ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಸಹಕಾರಿ ಸಂಘಕ್ಕೆ ಬೇಕಾಗುವ ಎಲ್ಲಾ ನಿಯಮಗಳಿಗೆ ನಾವು ಶಕ್ತರಾಗಿದ್ದೇವೆ ಎಂದು ತಿಳಿಸಿದರು. ಇದರ ಬಗ್ಗೆ ನಿರ್ಣಯ ಕೈಗೊಂಡು 20 ದಿವಸದೊಳಗೆ ನಿರ್ಣಯ ಪತ್ರವನ್ನು ನೀಡಲಾಗುವುದು ಎಂದು ಅಧ್ಯಕ್ಷರು ತಿಳಿಸಿದರು.

ಪ್ರತ್ಯೇಕ ಕೃಷಿ ಪತ್ತಿನ ಸಹಕಾರಿ ಸಂಘದ ರಚನೆಗೆ ಬಳಂಜ, ನಾಲ್ಕೂರು, ತೆಂಕಕಾರಂದೂರು ರೈತ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ನ್ಯಾಯತರ್ಪು ಜಾರಿಗೆಬೈಲು ನಿವಾಸಿ ಕೆ.ಎಂ. ಅಬೂಬಕ್ಕರ್ ರವರ ಬ್ಯಾಂಕ್ ಖಾತೆಯಿಂದ ಅಪರಿಚಿತ ಇಬ್ಬರು ವ್ಯಕ್ತಿಗಳಿಂದ ಹಣ ಕಳವು

Suddi Udaya

ಚಾರ್ಮಾಡಿಯಲ್ಲಿ ಕಾಡಾನೆ ಹಾವಳಿ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಪಿಎಮ್ ಕಿಸಾನ್ ಯೋಜನೆಯ ಇ-ಕೆವೈಸಿ ಕಾರ್ಯಕ್ರಮ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ನ್ಯಾಯತರ್ಪು ಸ್ವಸಹಾಯ ಸಂಘದ ಲಾಭಾಂಶ ವಿತರಣೆ

Suddi Udaya
error: Content is protected !!