25.7 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳನ್ನು ಸೆ.15 ರಂದು ಭೇಟಿಯಾಗಿ ಮುಕ್ತ ಚರ್ಚೆಯನ್ನು ನಡೆಸಿದರು.


ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಗಮಿಸಿದ್ದರು.
ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಅವರು ಸಮಾರೋಪ ಭಾಷಣ ಮಾಡಿದರು.


ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಕುವೆಟ್ಟು ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

ಕುವೆಟ್ಟು ಬ್ಲಾಕ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ, ಜೊತೆ ಕಾರ್ಯದರ್ಶಿ ಆಸೀಫ್ ಬಂಗೇರುಕಟ್ಟೆ ಧನ್ಯವಾದಗೈದರು.

Related posts

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಬೆಳ್ತಂಗಡಿ ಶ್ರೀ ಪ್ರಿಯದರ್ಶಿನಿ ಸೌಹಾರ್ದ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಿರ್ದೇಶಕರ ಅವಿರೋಧ ಆಯ್ಕೆ

Suddi Udaya

ಕುಕ್ಕೇಡಿ: ಶ್ರೀಮತಿ ಲಲಿತಾ ನಿಧನ

Suddi Udaya

ವೆನಿಲಾ ಕೃಷಿ ಅನುಭವಿಯಾಗಿದ್ದ ಅಬ್ದುಲ್ಲ ಪಣಕಜೆ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!