September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.17ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು.

ಈ ಸಾಲಿನ ವಾರ್ಷಿಕ ವ್ಯವಹಾರ ರೂ.333.45ಕೋಟಿ ನಡೆದಿದ್ದು ರೂ 1.07ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡ 11 ಡಿವಿಡೆಂಡ್ ಘೋಷಿಸಿದರು.

ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಮತ್ತು ದ. ಕ ಉತ್ತಮ ಸಂಘ ಪ್ರಶಸ್ತಿ ಪಡೆದ ಬಂದಾರು ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿಯವರಿಗೆ. ಶೇ.100 ಫಲಿತಾಂಶ ಪಡೆದ ಬಂದಾರು. ಮುಗ್ರು ಬುಲೆರಿ 3 ಶಾಲೆಯ ಮುಖ್ಯೋಪಾಧ್ಯಾಯರಿಗೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಂದರು ಶಾಲೆ ಯ ಪ್ರಶಾಂತ್ ರಿಗೆ ಮತ್ತು ವಾಲಿಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ಸನ್ಮಾನ ಮಾಡಲಾಯಿತು.

ಉಪಾಧ್ಯಕ್ಷ ಅಶೋಕ್ ನಿರ್ದೇಶಕರಗಳಾದ ರಾಜೀವ ರೈ ಉದಯ ಭಟ್, ಉದಯ ಬಿ.ಕೆ., ನಾರಾಯಣಗೌಡ ರಾಮಣ್ಣ ಮಡಿವಾಳ, ಪಿಜಿನಾ ಮುಗೇರ., ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿ.ಸಿ.ಸಿ ಪ್ರತಿನಿಧಿ ಸಂದೇಶ್‌ ಕುಮಾರ್ ಉಪಸ್ಥಿತರಿದ್ದರು. ಕಾರ್ಯನಿರ್ವಣಾಧಿಕಾರಿ ರಘುಪತಿ ಕೆ ವರದಿ ವಾಚಿಸಿದರು.

Related posts

ಬಂದಾರು : ಮೈರೋಳ್ತಡ್ಕ ಸ.ಉ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಬೆಳ್ತಂಗಡಿ: ವಿಧಾನಸಭಾ ಸ್ಪೀಕರ್ ಯು ಟಿ ಖಾದರ್ ರವರಿಗೆ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ

Suddi Udaya

ಕನ್ಯಾಡಿ ಸೇವಾನಿಕೇತನಕ್ಕೆ ಭೋರುಕಾ ಪವರ್ ಕಾರ್ಪೊರೇಷನ್ ಲಿಮಿಟೆಡ್‌ನ ಭೇಟಿ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya

ಕರಾವಳಿಯ ಶ್ರೇಷ್ಠ ಶಾಸಕ ಗೌರವವನ್ನು ಪಡೆದ ಶಾಸಕ ಹರೀಶ್ ಪೂಂಜರಿಗೆ: ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಭಕ್ತರು, ಬಳಂಜ ನಾಲ್ಕೂರು ತೆಂಕಕಾರಂದೂರು ಗ್ರಾಮಸ್ಥರಿಂದ ಗೌರವಾರ್ಪಣೆ

Suddi Udaya
error: Content is protected !!