April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆ- ಶೇ 20 ಡಿವಿಡೆಂಡ್ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳ ಡಿ ವರ್ಗದ ಹೊರ ಗುತ್ತಿಗೆ ನೌಕರರಿಗೆ ಉಚಿತ ಸಮವಸ್ತ್ರ ನೀಡುವ ಘೋಷಣೆ

ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ಮಹಾಸಭೆಯು ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಸೆ.17ರಂದು ಸರಕಾರಿ ನೌಕರರ ಏಕತಾ ಸೌಧ ಸಭಾಭವನದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಹಕಾರಿ ಸಂಘವು ಲಾಭಾಂಶದಲ್ಲಿ 20% ಡೆವಿಡೆಂಡ್ ನ್ನು ಹಾಗೂ ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಹಾಗೂ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಹಾಗೂ ತಾಲೂಕಿನ ಎಲ್ಲಾ ಸರಕಾರಿ ಆಸ್ಪತ್ರೆಗಳಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 40 ಮಂದಿ ಡಿ’ ವರ್ಗದ ಎಲ್ಲಾ ಪುರುಷ ಮತ್ತು ಮಹಿಳಾ ನೌಕರರಿಗೆ ಇಲಾಖೆಯು ಸೂಚಿಸಿದ ಸಮವಸ್ತ್ರವನ್ನು ನಮ್ಮ ಸಹಕಾರಿ ಸಂಘದ ವತಿಯಿಂದ ಉಚಿತವಾಗಿ ನೀಡುವುದಾಗಿ ಸಂಘದ ಅಧ್ಯಕ್ಷರಾದ, ರಾಜ್ಯ ಸರಕಾರಿ ನೌಕರರ ಕೇಂದ್ರ ಸಂಘದ ಜಂಟಿ ಕಾರ್ಯದರ್ಶಿಯವರಾದ ಜಿ. ಜಯಕೀರ್ತಿ ಜೈನ್ ರವರು ಘೋಷಿಸಿದರು.

ಸಹಕಾರಿ ಸಂಘದ ಸದಸ್ಯರ ಮಕ್ಕಳು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಯಲ್ಲಿ ಶೇಕಡಾ 90 ಕ್ಕಿಂತ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಹಾಗೂ ಕ್ಲಪ್ತ ಸಮಯದಲ್ಲಿ ಸಾಲ ಮರುಪಾವತಿ ಮಾಡಿದ ಸುಮಾರು 20 ಜನರನ್ನು ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಚಿದಾನಂದ ಎಸ್, ಹೂಗಾರ್ ಸ್ವಾಗತಿಸಿ, ನಿರ್ದೇಶಕರಾದ ಶ್ರೀಮತಿ ರತ್ನಾವತಿ ಇವರು ಪ್ರಾರ್ಥನೆ ಮಾಡಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲಾ ಜ್ಯೋತಿರಾಜ್ ಇವರು ಸಂಘದ ವರದಿ ನೀಡಿದರು. ಸಂಘದ ಕಾನೂನು ಸಲಹೆಗಾರರಾದ ಶಶಿಕಿರಣ್ ಜೈನ್, ಸಲಹೆಗಾರರಾದ ವಸಂತ ಸುವರ್ಣ, ಶಿವಯ್ಯ ನ್ಯಾಯವಾದಿಗಳು ಕೊಕ್ಕಡ ಶಾಖಾಧಿಕಾರಿ ಅತಿಶಯ್ ಜೈನ್ ಸಿಬ್ಬಂದಿಗಳಾದ ಶ್ರೀಮತಿ ವಿಶಾಲ ಹಾಗೂ ನಿರ್ದೇಶಕರಾದ ಹಾಗೂ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷರಾದ ಜಯರಾಜ್ ಜೈನ್‌, ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ಶ್ರೀಮತಿ ಗಂಗಾರಾಣಿ ನಾ. ಜೋಶಿ ನಿರ್ದೇಶಕರಾದ ಅಬ್ದುಲ್ ರಜಾಕ್, ಚಂದ್ರಶೇಖರ್, ಪರಮೇಶ್, ನಾಗರಾಜ್‌ ಡಿ, ಶ್ರೀಮತಿ ಹೇಮಲತಾ ಎಂ, ಶ್ರೀಮತಿ, ಹಿಮಪ್ರಭಾ ಉಪಸ್ಥಿತರಿದ್ದರು. ಸಂಘದ ನಿರ್ದೇಶಕರಾದ ಶ್ರೀಮತಿ ಆರತಿ ವಂದಿಸಿದರು.

Related posts

ಬೆಳ್ತಂಗಡಿಯಲ್ಲಿ ಲಯನ್ಸ್ ಯಕ್ಷೋತ್ಸವ: ಧರ್ಮಸ್ಥಳ ಮೇಳದ ಹಿರಿಯ ಕಲಾವಿದರು ಮತ್ತು ಸಿಬ್ಬಂದಿಗಳಿಗೆ ಗೌರವ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ವೇಣೂರು ಭಗವಾನ್ ಶ್ರೀ ಬಾಹುಬಲಿಗೆ ಮಹಾ ಮಸ್ತಕಾಭಿಷೇಕ: ಶ್ರೀ ಧ.ಮಂ. ಐಟಿಐ ವಿದ್ಯಾರ್ಥಿಗಳಿಂದ ಸ್ವಚ್ಚತಾ ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಂ. ಪದವಿ ಕಾಲೇಜಿನ ವಿವಿಧ ವಿಭಾಗದಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿದ ಸದಾನಂದ ಬಿ ಮುಂಡಾಜೆ ರವರಿಗೆ ಗ್ರಂಥಾಲಯ ವಿಭಾಗದಿಂದ ಬೀಳ್ಕೊಡುಗೆ

Suddi Udaya

ಬದ್ಯಾರು ಜಂಕ್ಷನ್ ರಸ್ತೆಯಲ್ಲಿ ಸರಣಿ ಅಪಘಾತ, ನುಜ್ಜು ಗುಜ್ಜಾದ ವಾಹನಗಳು,ರಿಕ್ಷಾ ಡ್ರೈವರ್ ಗೆ ಗಾಯ

Suddi Udaya

ಕೊಕ್ಕಡ: 9/11 ಆದೇಶ ವಿರೋಧಿಸಿ ಪಂಚಾಯತ್ ಮಟ್ಟದಲ್ಲಿ ಅಥವಾ ಬೆಳ್ತಂಗಡಿ ತಾಲೂಕು ಕೇಂದ್ರದಲ್ಲಿ ಅನುಮೋದನೆ ನೀಡುವಂತೆ ನಿರ್ಣಯ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ