30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 198.74 ಕೋಟಿ ವ್ಯವಹಾರ,66.79 ಲಕ್ಷ ನಿವ್ವಳ ಲಾಭ,ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಣೆ

ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಎನ್ ಸುಧಾಕರ ಭಂಡಾರಿ ಅವರ ಅಧ್ಯಕ್ಷತೆಯಲ್ಲಿ ಸೆ. 17 ರಂದು ಧರ್ಮಶ್ರೀ ಸಭಾಭವನ ನಾರಾವಿಯಲ್ಲಿ ನಡೆಯಿತು.ವರದಿ ಸಾಲಿನಲ್ಲಿ ಸಂಘವು ರೂ 198.74 ಕೋಟಿ ವ್ಯವಹಾರ ಮಾಡಿದ್ದು,66.79 ಲಕ್ಷ ನಿವ್ವಳ ಲಾಭ ಗಳಿಸಿ ಸದಸ್ಯರಿಗೆ 12 ಶೇ ಡಿವಿಡೆಂಟ್ ಘೋಷಿಸಲಾಯಿತು..

ಸಂಘವು ವ್ಯವಹಾರದೊಂದಿಗೆ ಸಾಮಾಜಿಕವಾಗಿ ತೊಡಗಿಸಿಕೊಂಡಿದೆ ರಂದು ಸಂಘದ ಅಧ್ಯಕ್ಷ ಎನ್. ಸುಧಾಕರ ಭಂಡಾರಿ ಹೇಳಿದರು.ವೇದಿಕೆಯಲ್ಲಿ ನಾರಾವಿ ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್, ಸಂಘದ ಉಪಾಧ್ಯಕ್ಷ ಸದಾನಂದ ಗೌಡ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಶಶಿಕಾಂತ್ ಜೈನ್,ನಿರ್ದೇಶಕರರಾದ ಎನ್ ಜೀವಂಧರ್ ಕುಮಾರ್, ವಿಠಲ ಪೂಜಾರಿ,ರಾಜೇಂದ್ರ ಕುಮಾರ್,ಜಗದೀಶ ಹೆಗ್ಡೆ, ಲಕ್ಷ್ಮಣ ಪೂಜಾರಿ, ಲಿಂಗಪ್ಪ ಮಲೆಕುಡಿಯ,ಹರೀಶ್ ಹೆಗ್ಡೆ,ಪೆರ್ನ,ಶ್ರೀಮತಿ ಯಶೋಧ,ಶ್ರೀಮತಿ ಸುಜಲತಾ ಉಪಸ್ಥಿತರಿದ್ದರು.

ತೋಟಗಾರಿಕ ಇಲಾಖೆಯ ಮಹಾವೀರ್ ಅವರು ತೋಟಗಾರಿಕೆ ಇಲಾಖೆಯಲ್ಲಿ ಸಿಗುವ ಸವಲತ್ತುಗಳ ಬಗ್ಗೆ ಸಭೆಗೆ ತಿಳಿಸಿದರು.ಕಾರ್ಯಕ್ರಮದಲ್ಲಿ ಅಂಚೆ ಇಲಾಖೆಯ ಅಂಚೆ ವಿತರಕರನ್ನು ಗೌರವಿಸಿದರು.ಸೊಸೈಟಿ ಸಿಬ್ಬಂದಿಗಳಾದ ವನಿತಾ,ಶೇಖರ ಕೆ,ಮಲ್ಲಿಕಾ,ಶ್ರೇಯಾಂಸ ಕುಮಾರ್,ಅಶೋಕ್ ಸಹಕರಿಸಿದರು.

Related posts

ಪುಂಜಾಲಕಟ್ಟೆ ಉಳಿ ಯುವಕ ಮಂಡಲದಿಂದ ಭಜನಾ ತರಬೇತಿ ಕಾರ್ಯಗಾರ

Suddi Udaya

ಓಡಿಲ್ನಾಳ ಸ.ಉ.ಪ್ರಾ. ಶಾಲಾ ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಬಳಂಜ: ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಬೊಂಟ್ರೊಟ್ಟು ಕ್ಷೇತ್ರದಿಂದ ಶಾಸಕ ಹರೀಶ್ ಪೂಂಜರಿಗೆ ಗೌರವಾರ್ಪಣೆ

Suddi Udaya

ಪಿಕ್‌ಆಪ್ ವಾಹನ ತಡೆಗಟ್ಟಿ: ಜೀವಬೆದರಿಕೆ ಒಡ್ಡಿದ ಆರೋಪ: ಮೆಸ್ಕಾಂ ಉದ್ಯೋಗಿ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸು

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!