22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.17ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು.

ಈ ಸಾಲಿನ ವಾರ್ಷಿಕ ವ್ಯವಹಾರ ರೂ.333.45ಕೋಟಿ ನಡೆದಿದ್ದು ರೂ 1.07ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡ 11 ಡಿವಿಡೆಂಡ್ ಘೋಷಿಸಿದರು.

ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಮತ್ತು ದ. ಕ ಉತ್ತಮ ಸಂಘ ಪ್ರಶಸ್ತಿ ಪಡೆದ ಬಂದಾರು ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿಯವರಿಗೆ. ಶೇ.100 ಫಲಿತಾಂಶ ಪಡೆದ ಬಂದಾರು. ಮುಗ್ರು ಬುಲೆರಿ 3 ಶಾಲೆಯ ಮುಖ್ಯೋಪಾಧ್ಯಾಯರಿಗೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಂದರು ಶಾಲೆ ಯ ಪ್ರಶಾಂತ್ ರಿಗೆ ಮತ್ತು ವಾಲಿಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ಸನ್ಮಾನ ಮಾಡಲಾಯಿತು.

ಉಪಾಧ್ಯಕ್ಷ ಅಶೋಕ್ ನಿರ್ದೇಶಕರಗಳಾದ ರಾಜೀವ ರೈ ಉದಯ ಭಟ್, ಉದಯ ಬಿ.ಕೆ., ನಾರಾಯಣಗೌಡ ರಾಮಣ್ಣ ಮಡಿವಾಳ, ಪಿಜಿನಾ ಮುಗೇರ., ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿ.ಸಿ.ಸಿ ಪ್ರತಿನಿಧಿ ಸಂದೇಶ್‌ ಕುಮಾರ್ ಉಪಸ್ಥಿತರಿದ್ದರು. ಕಾರ್ಯನಿರ್ವಣಾಧಿಕಾರಿ ರಘುಪತಿ ಕೆ ವರದಿ ವಾಚಿಸಿದರು.

Related posts

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ಪೆರುವಡಿ ನಾರಾಯಣ ಭಟ್ ನಿಧನಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಶಾಸಕ ಹರೀಶ್ ಪೂಂಜರ ಹುಟ್ಟು ಹಬ್ಬದ ಪ್ರಯುಕ್ತ ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಭಾಜಪ ಬೆಳ್ತಂಗಡಿ ಮಂಡಲ ವತಿಯಿಂದ ವಿಜಯಸಂಕಲ್ಪ ಅಭಿಯಾನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ನಾಲ್ಕೂರು :ಇನಾಸ್ ಪಿಂಟೋ ನಿಧನ

Suddi Udaya
error: Content is protected !!