ಅ.22 ರಂದು ಬಳಂಜದಲ್ಲಿ ವೈಭವದ ಶಾರದಾ ಮಹೋತ್ಸವ: ಪೂರ್ವತಯಾರಿ ಬಗ್ಗೆ ಸಮಾಲೋಚನೆ ಸಭೆ

Suddi Udaya

ಬಳಂಜ:ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು ಇದರ ವತಿಯಿಂದ ಸಾರ್ವಜನಿಕ ವೈಭವದ ಶ್ರೀ ಶಾರಾದ ಪೂಜೋತ್ಸವವು ಅ.22 ರಂದು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನದ ವಠಾರದಲ್ಲಿ ನಡೆಯಲಿದೆ.

ಸಂಘದ ಮಾಸಿಕ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಮಕ್ಕಳಿಗೆ,ಯುವಕರಿಗೆ,ಯುವತಿಯರಿಗೆ ವಿವಿಧ ಸ್ಪರ್ದೆಗಳನ್ನು ಏರ್ಪಾಡಿಸುವುದು, ವಿವಿಧ ಭಜನಾ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್, ಗೌರವಾದ್ಯಕ್ಷ ಹೆಚ್.ಧರ್ಣಪ್ಪ ಪೂಜಾರಿ,ಪ್ರ.ಕಾರ್ಯದರ್ಶಿ ಜಗದೀಶ್ ಪೂಜಾರಿ,ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್,ಜೊತೆ ಕಾರ್ಯದರ್ಶಿ ಪ್ರವೀಣ್ ಡಿ ಕೋಟ್ಯಾನ್, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್, ನಿರ್ದೇಶಕರಾದ ಸಂತೋಷ್ ಕುಮಾರ್ ಕಾಪಿನಡ್ಕ, ಯೋಗೀಶ್ ಆರ್, ಪ್ರವೀಣ್ ಲಾಂತ್ಯಾತು, ಸದಾನಂದ ಬೊಂಟ್ರೋಟ್ಟು, ದಿನೇಶ್ ಅಂತರ,ಜಗದೀಶ್ ಪೂಜಾರಿ ತಾರಿಪಡ್ಪು,ಪವನ್ ಕಟ್ಟೆ,ರಂಜಿತ್ ಮಜಲಡ್ಡ, ರಕ್ಷಿತ್ ಬಗ್ಯೋಟ್ಟು,ಮಹಿಳಾ ಬಿಲ್ಲವ ವೇದಿಕೆ ಕಾರ್ಯದರ್ಶಿ ಅಶ್ವಿತಾ ಸಂತೋಷ್,ಮಾಜಿ ಅಧ್ಯಕ್ಷರಾದ ವಿಶಾಲ ಜಗದೀಶ್,ಪುಷ್ಪಾ ಗೀರೀಶ್,ಸುಮಿತ್ರಾ ಪ್ರಶಾಂತ್, ಯುವ ಬಿಲ್ಲವ ವೇದಿಕೆಯ ಆಕರ್ಷ್ ಯೈಕುರಿ,ನವೀನ್ ಸುವರ್ಣ,ರಚನ್ ಉಪಸ್ಥಿತರಿದ್ದರು.

Leave a Comment

error: Content is protected !!