September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.17ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು.

ಈ ಸಾಲಿನ ವಾರ್ಷಿಕ ವ್ಯವಹಾರ ರೂ.333.45ಕೋಟಿ ನಡೆದಿದ್ದು ರೂ 1.07ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡ 11 ಡಿವಿಡೆಂಡ್ ಘೋಷಿಸಿದರು.

ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಮತ್ತು ದ. ಕ ಉತ್ತಮ ಸಂಘ ಪ್ರಶಸ್ತಿ ಪಡೆದ ಬಂದಾರು ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿಯವರಿಗೆ. ಶೇ.100 ಫಲಿತಾಂಶ ಪಡೆದ ಬಂದಾರು. ಮುಗ್ರು ಬುಲೆರಿ 3 ಶಾಲೆಯ ಮುಖ್ಯೋಪಾಧ್ಯಾಯರಿಗೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಂದರು ಶಾಲೆ ಯ ಪ್ರಶಾಂತ್ ರಿಗೆ ಮತ್ತು ವಾಲಿಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ಸನ್ಮಾನ ಮಾಡಲಾಯಿತು.

ಉಪಾಧ್ಯಕ್ಷ ಅಶೋಕ್ ನಿರ್ದೇಶಕರಗಳಾದ ರಾಜೀವ ರೈ ಉದಯ ಭಟ್, ಉದಯ ಬಿ.ಕೆ., ನಾರಾಯಣಗೌಡ ರಾಮಣ್ಣ ಮಡಿವಾಳ, ಪಿಜಿನಾ ಮುಗೇರ., ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿ.ಸಿ.ಸಿ ಪ್ರತಿನಿಧಿ ಸಂದೇಶ್‌ ಕುಮಾರ್ ಉಪಸ್ಥಿತರಿದ್ದರು. ಕಾರ್ಯನಿರ್ವಣಾಧಿಕಾರಿ ರಘುಪತಿ ಕೆ ವರದಿ ವಾಚಿಸಿದರು.

Related posts

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಉಜಿರೆ ಎಸ್.ಡಿ.ಎಂ ಸಿ.ಬಿ.ಎಸ್.ಇ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪನಾ ದಿನಾಚರಣೆ ಮತ್ತು ಧ್ವಜ ದಿನಾಚರಣೆ

Suddi Udaya

ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಮತ್ತು ರೋಟರಿ ಸೇವಾ ಟ್ರಸ್ಟ್ ಇದರ ವತಿಯಿಂದ ತಾಲೂಕಿನ ಬಡಕುಟುಂಬದ ಪ್ರತಿಭಾನ್ವಿತ 145 ವಿದ್ಯಾರ್ಥಿಗಳಿಗೆ ರೂ.10.26 ಲಕ್ಷ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಇಂದಬೆಟ್ಟು: ಬಲ್ಲಾಳ್ ಬಸ್ಸಿನ ಚಾಲಕ ಸಂತೋಷ್ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪ್ರಧಾನಿ ನರೇಂದ್ರ ಮೋದಿಜಿಯವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆಯಲ್ಲಿ ಬಿಜೆಪಿ ಬೆಳ್ತಂಗಡಿ ಮಂಡಲ ಎರಡನೇ ಭಾರಿಗೆ ರಾಜ್ಯದಲ್ಲಿ ಪ್ರಥಮ ಸ್ಥಾನ

Suddi Udaya

ಬಿಸಿರೋಡ್ ಬಿಂಎಂಬಿ ಸಮನ್ವಯ ಜೀತೋ ಚಾಲಕ ಮಾಲಕ ಸಂಘದಿಂದ ಎಸ್ಸೆಸ್ಸೆಲ್ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!