23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ 1.07ಕೋಟಿ ನಿವ್ವಳ ಲಾಭ, ಶೇ. 11 ಡಿವಿಡೆಂಡ್ ಘೋಷಣೆ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.17ರಂದು ಪದ್ಮುಂಜ ಸಹಕಾರಿ ಸಂಘದ ರೈತ ಸಭಾ ಸಭಾಭವನದಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಕ್ಷಿತ್ ಪಣಿಕ್ಕರ ವಹಿಸಿದ್ದರು.

ಈ ಸಾಲಿನ ವಾರ್ಷಿಕ ವ್ಯವಹಾರ ರೂ.333.45ಕೋಟಿ ನಡೆದಿದ್ದು ರೂ 1.07ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ ಶೇಕಡ 11 ಡಿವಿಡೆಂಡ್ ಘೋಷಿಸಿದರು.

ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿ ಪ್ರತಿಭಾವಂತ ವಿದ್ಯಾರ್ಥಿ ಗಳಿಗೆ ಸನ್ಮಾನ ಮತ್ತು ದ. ಕ ಉತ್ತಮ ಸಂಘ ಪ್ರಶಸ್ತಿ ಪಡೆದ ಬಂದಾರು ಮಹಿಳಾ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಿಗೆ ಮತ್ತು ಕಾರ್ಯದರ್ಶಿಯವರಿಗೆ. ಶೇ.100 ಫಲಿತಾಂಶ ಪಡೆದ ಬಂದಾರು. ಮುಗ್ರು ಬುಲೆರಿ 3 ಶಾಲೆಯ ಮುಖ್ಯೋಪಾಧ್ಯಾಯರಿಗೆ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಬಂದರು ಶಾಲೆ ಯ ಪ್ರಶಾಂತ್ ರಿಗೆ ಮತ್ತು ವಾಲಿಬಾಲ್ ನಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿ ಗಳಿಗೆ ಸನ್ಮಾನ ಮಾಡಲಾಯಿತು.

ಉಪಾಧ್ಯಕ್ಷ ಅಶೋಕ್ ನಿರ್ದೇಶಕರಗಳಾದ ರಾಜೀವ ರೈ ಉದಯ ಭಟ್, ಉದಯ ಬಿ.ಕೆ., ನಾರಾಯಣಗೌಡ ರಾಮಣ್ಣ ಮಡಿವಾಳ, ಪಿಜಿನಾ ಮುಗೇರ., ಶೀಲಾವತಿ, ವಿನಯಶ್ರೀ, ದಿನೇಶ್ ನಾಯ್ಕ, ಕೇಶವ, ಡಿ.ಸಿ.ಸಿ ಪ್ರತಿನಿಧಿ ಸಂದೇಶ್‌ ಕುಮಾರ್ ಉಪಸ್ಥಿತರಿದ್ದರು. ಕಾರ್ಯನಿರ್ವಣಾಧಿಕಾರಿ ರಘುಪತಿ ಕೆ ವರದಿ ವಾಚಿಸಿದರು.

Related posts

ಬೆಳ್ತಂಗಡಿ:ಮಹಿಳಾ ವೃಂದದ ನೂತನ ಕಟ್ಟಡ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 11 ನೇ ಗುರುತಿನಲ್ಲಿ ಎಸ್ಐಟಿ ಯಿಂದ ಕಾರ್ಯಾಚರಣೆ ಆರಂಭ

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಧನಸಹಾಯ ವಿತರಣೆ

Suddi Udaya

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಬಂಗಾಡಿ ರವಿರಾಜ ಬಳ್ಳಾಲ್ ಅವರ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
error: Content is protected !!