24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ವಾಣಿ ಶಿಕ್ಷಣ ಸಂಸ್ಥೆಗೆ ಅಮೇರಿಕದ ಡಾ. ರಾಮಯ್ಯ ಗೌಡ, ಶ್ರೀಮತಿ ಕೋನಿ ದಂಪತಿ ಭೇಟಿ

Suddi Udaya

ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ 27ನೇ ವರ್ಷದ ಸಾಮೂಹಿಕ ಶ್ರೀ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯಿತ್ ಸ್ಥಾಯಿ ಸಮಿತಿಯ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಶೆಟ್ಟಿ ಆಯ್ಕೆ

Suddi Udaya

ಬೆಳ್ತಂಗಡಿ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮನಿಧಿ ಯೋಜನೆಯ ಸಹಾಯಧನ ಹಸ್ತಾಂತರ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಮಹಾಸಭೆ: ವಾರ್ಷಿಕ 150 ಕೋಟಿ ವ್ಯವಹಾರ ಮಾಡಿ 69 ಲಕ್ಷ ನಿವ್ವಳ ಲಾಭ ಗಳಿಸಿದ್ದೇವೆ: ನವೀನ್ ಕೆ ಸಾಮಾನಿ

Suddi Udaya
error: Content is protected !!