July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಭೀಷ್ಮ ಏಕಾದಶೀ ಪ್ರಯುಕ್ತ ವಿಷ್ಣು ಸಹಸ್ರನಾಮ ಪಠಣ

Suddi Udaya

ಮಚ್ಚಿನ ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಹಂಸ ಎಲೆಕ್ಟ್ರಾನಿಕ್ಸ್ ಮತ್ತು ಹೋಮ್ ಅಪ್ಲೆಯನ್ಸ್& ಫರ್ನಿಚರ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ದರ ಕಡಿತ ಮಾರಾಟ

Suddi Udaya

ತಾಲೂಕಿನಾದ್ಯಂತ ಗಾಳಿ ಮಳೆ: ವಿವಿಧ ಕಡೆಗಳಲ್ಲಿ ಹಾನಿ

Suddi Udaya

ಪುತ್ತೂರು: ಹಿಂದೂ ಕಾರ್ಯಕರ್ತರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ: ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಶ್ರೀ ಶಾರದಾಂಬ ಯಕ್ಷಗಾನ ಕಲಾ ಬಳಗದಿಂದ ಬಣ್ಣಗಾರಿಕೆ ಶಿಬಿರ

Suddi Udaya
error: Content is protected !!