September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಬಂಟರ ಯಾನೆ ನಾಡವರ ಸಂಘ ಮಡಂತ್ಯಾರು ವಲಯದಿಂದ ಮನೆ ದುರಸ್ತಿ ಕಾರ್ಯ

Suddi Udaya

ಪದ್ಮುಂಜ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಇಂದಬೆಟ್ಟು ಸ.ಹಿ.ಪ್ರಾ. ಶಾಲೆಗೆ ಹಲವಾರು ಪ್ರಶಸ್ತಿ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ..ಹಿ.ಪ್ರಾ. ಶಾಲಾ ಸಂಸತ್ತು ರಚನೆ

Suddi Udaya
error: Content is protected !!