25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

ಕುತ್ಲೂರು: ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೋವಧೆ ಮಾಡಿ ಮಾಂಸವನ್ನು ಮಾರಾಟಕ್ಕಾಗಿ ಕೊಂಡೋಗುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಮಾಂಸ ಸಹಿತ ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೆ.18 ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ ಕೆಇಇ 1279 ನೋಂದಣಿ ಸಂಖ್ಯೆಯ ಜೀಪಿನಲ್ಲಿ ಆರೋಪಿಗಳಾದ ತೋಡುಪುಡ ತಾಲೂಕು,ಇಡ್ಕಿ ಜಿಲ್ಲೆ, ಕೇರಳ ನಿವಾಸಿ ಜಿನು ತೋಮಸ್ (34) ಮತ್ತು ಕುತ್ಲೂರು ನಿವಾಸಿ ರಂಜಿತ್ (31) ಎಂಬವರುಗಳು ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೊ ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸ್ ಉಪನಿರೀಕ್ಷಕ ಹಾಗೂ ಸಿಬ್ಬಂದಿಗಳು ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 58-2023 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ ೨೦೨೦ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಮಿತಿಯಿಂದ ಶ್ರೀ ಗುರುಪೂಜೆ: ಮಾತೃ ಸಂಘದಿಂದ ಮಂಜೂರಾದ 2 ಅಶಕ್ತ ಕುಟುಂಬಗಳಿಗೆ ಸಹಾಯಧನ ವಿತರಣೆ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಕಲ್ಮಂಜ: ಸತ್ಯನಪಲ್ಕೆ ಎಂಬಲ್ಲಿ ಸೇತುವೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ: ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಕಳೆಂಜ: ಮನೆ ಪಂಚಾಂಗ ದೂಡಿ ಹಾಕಿದ ಪ್ರಕರಣ: ವಲಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಮೇಲೆ ಪ್ರಕರಣ ದಾಖಲು

Suddi Udaya
error: Content is protected !!