23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

ಕೊಕ್ಕಡ: ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೇ ಕಾಮಗಾರಿ ಮಜ್ದೂರ್ ಸಂಘ ಕೊಕ್ಕಡ ವಲಯದ ವತಿಯಿಂದ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ (ವಿಶ್ವ ಕರ್ಮ ಜಯಂತಿ ) ಅಸಂಘಟಿತ ಕಾರ್ಮಿಕರಿಗೆ ಸಿಗುವ ಸರ್ಕಾರಿ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ ದಾನಿಗಳಿಗೆ ಗೌರವಾರ್ಷಣೆ ಕಾರ್ಯಕ್ರಮವು ಅಂಬೇಡ್ಕರ್ ಭವನದಲ್ಲಿ ಸೆ.17 ರಂದು ಜರುಗಿತು.

ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿ ಮಾತನಾಡಿ ಯಾವುದೇ ಮನೆ ಅಥವಾ ಕಟ್ಟಡ ಕಟ್ಟಿ ಶುಭಾರಂಭದ ಸಂದರ್ಭ ಮೊದಲ ಗೌರವವನ್ನು ಕಾರ್ಮಿಕರಿಗೆ ನೀಡುತ್ತೇವೆ ಭಾರತ ಸರ್ಕಾರವು ಕಾರ್ಮಿಕರಿಗಾಗಿ ಒಳ್ಳೊಳ್ಳೆ ಯೋಜನೆಗಳನ್ನು ಹಾಕಿಕೊಂಡಿದೆ ಕೊಕ್ಕಡ ಮಜ್ದೂರ್ ಸಂಘವು ಕಾರ್ಮಿಕರಿಗೆ ಮಾಹಿತಿಗಳನ್ನು ನೀಡಿ ವಿವಿಧ ಅನುದಾನಗಳನ್ನು ತೆಗೆಸಿಕೊಟ್ಟಿದೆ. ಇದರಿಂದ ಬಡವರು ಕೂಡಾ ಉತ್ತಮವಾದ ಜೀವನ ನಡೆಸಲು ಸಹಕಾರಿಯಾಗಿದೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕೊಕ್ಕಡ ವಲಯ ಭಾರತೀಯ ಮಜ್ದೂರ್ ಸಂಘದ ಸಂಯೋಜಕ ಚಂದ್ರಶೇಖರ ಗಾಣಗಿರಿ ವಹಿಸಿದರು.

ವೇದಿಕೆಯಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಕೃಷ್ಣ ಭಟ್, ಹಿರಿಯ ಕಾರ್ಮಿಕ ನಾಯಕ ಹಾಗೂ ಭಾರತೀಯ ಮಜ್ದೂರ್ ಸಂಘದ ನಿಕಟಪೂರ್ವ ರಾಜ್ಯಾಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಕೊಕ್ಕಡ ಗ್ರಾ.ಪಂ. ನ ನಿಕಟ ಪೂರ್ವಾಧ್ಯಕ್ಷ ಯೋಗೀಶ್ ಆಲಂಬಿಲ, ಕೊಕ್ಕಡ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಬೇಬಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ದಾನಿಗಳಾದ ಕೃಷ್ಣ ಭಟ್, ಬಾಲಕೃಷ್ಣ ನೈಮಿಷ, ಕುಶಾಲಪ್ಪ ಗೌಡ ಪೂವಾಜೆ , ಗಣೇಶ್ ಕುಲಾಯಿ ಕೊಕ್ಕಡ, ಮಂಜುನಾಥ ವಕೀಲರು, ಸಂತೋಷ್ ಪಾಲೆತ್ತಡಿ ಕಳೆಂಜ, ಕುಶಲ ಕರ್ಮಿಗಳಾದ ಕಿಟ್ಟ ಮೇಸ್ತ್ರೀ ಕಡೀರ, ಶ್ರೀನಿವಾಸ ಆಚಾರ್ಯ ಕಾಪಿನಬಾಗಿಲು, ಮಜ್ದೂರ್ ಸಂಘದ ಮೊದಲಿಂದಲೂ ದುಡಿದ ಶ್ರೀಮತಿ ವನಜಾಕ್ಷಿ ಕೊಕ್ಕಡ, ವಿವಿಧ ವಸ್ತುಗಳನ್ನು ನೀಡಿದ ಯೋಗಿಶ್ ಆಲಂಬಿಲ, ಖಾಲಿದ್ ಕೊಕ್ಕಡ, ಯೋಗೀಶ್ ನಿಡ್ಲೆ, ಶಶಿಚಂದ್ರ ಅರಸಿನಮಕ್ಕಿ, ರಾಜೇಶ್ ಎಂ.ಕೆ, ಕಾರ್ಯತಡ್ಕ, ಸರೋಜ, ಗಿರೀಶ್, ಮಹಾವೀರ ಕಾಲೋನಿ ಕೊಕ್ಕಡ, ಬಿ.ಎಂಎಸ್ ರಿಕ್ಷಾ ಚಾಲಕ ಸಂಘ ಕೊಕ್ಕಡ, ಬಿಎಂಎಸ್ ರಿಕ್ಷಾ ಚಾಲಕರ ಸಂಘ ಕಳೆಂಜ ರವರನ್ನು ಗೌರವಿಸಲಾಯಿತು.

ಕೊಕ್ಕಡ ವಲಯ ಭಾರತೀಯ ಮಜ್ದೂರ್ ಸಂಘದ ಸಂಯೋಜಕ ಚಂದ್ರಶೇಖರ ಗಾಣಗಿರಿ ಸ್ವಾಗತಿಸಿದರು.

ಬೆಳ್ತಂಗಡಿ ತಾಲೂಕು ಸಂಯೋಜಕ ಸಾಂತಪ್ಪ ಕಲ್ಮಂಜ ಧನ್ಯವಾದವಿತ್ತರು. ಭಾರತೀಯ ಮಜ್ದೂರ್ ಸಂಘ ರಾಜ್ಯ ಕಾರ್ಯದರ್ಶಿ ಜಯರಾಜ್ ಸಾಲ್ಯಾನ್, ಪ್ರಾಸ್ತಾವಿಕವಾಗಿ ಮಾತನಾಡಿದರು. ಕೇಶವ ಕೊಲ್ಲಾಜೆಪಲ್ಕೆ ಕಾರ್ಯಕ್ರಮ ನಿರೂಪಿಸಿದರು.

Related posts

ಜು.5: ಉಪ್ಪಿನಂಗಡಿ – ಕುಪ್ಪೆಟ್ಟಿ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ : ಬಿಜೆಪಿ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಪ್ರತಿಭಟನೆ

Suddi Udaya

ಚಾರ್ಮಾಡಿ ಗ್ರಾ.ಪಂ. ಮಟ್ಟದ ಸುಸ್ಥಿರ ಅಭಿವೃದ್ಧಿ ಮತ್ತು ಮಕ್ಕಳ ಹಕ್ಕುಗಳ ತರಬೇತಿ ಕಾರ್ಯಕ್ರಮ, ಭಿತ್ತಿಪತ್ರ ಬಿಡುಗಡೆ

Suddi Udaya

ರಾತ್ರಿ 3 ಗಂಟೆಗೆ ಚಾರ್ಮಾಡಿ ಮೂಲಕ ಬೆಳ್ತಂಗಡಿ ತಲುಪುವ ಬಂಗೇರರ ಪ್ರಾರ್ಥಿವ ಶರೀರ: ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಅವಕಾಶ ಬೆಳ್ತಂಗಡಿ ನಗರದಲ್ಲಿ ಅಂತಿಮ ಯಾತ್ರೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ‌ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
error: Content is protected !!