30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಪುರಾಣ ವಾಚನ-ಪ್ರವಚನ: ಸಮಾರೋಪ ಸಮಾರಂಭ

ಉಜಿರೆ: ಧರ್ಮದ ಮರ್ಮವನ್ನರಿತು ನಮ್ಮ ದೈನಂದಿನ ಜೀವನದಲ್ಲಿ ಆಚರಣೆ ಮಾಡಿದರೆ ಜೀವನ ಪಾವನವಾಗುತ್ತದೆ. ಎಲ್ಲೆಲ್ಲೂ ಸುಖ-ಶಾಂತಿ, ನೆಮ್ಮದಿಯಿಂದ ಸಾಮಾಜಿಕ ಸಾಮರಸ್ಯ ಮೂಡಿ ಬರುತ್ತದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದರು.

ಅವರು ಸೆ.17 ರಂದು ಧರ್ಮಸ್ಥಳದಲ್ಲಿ 52ನೆ ವರ್ಷದ ಪುರಾಣ ವಾಚನ-ಪ್ರವಚನದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.


ಪುರಾಣ ವಾಚನ – ಪ್ರವಚನ ಶ್ರವಣದಿಂದ ಭಗವಂತನ ದರ್ಶನವಾಗಿ ಆಧ್ಯಾತ್ಮಿಕ ಉನ್ನತಿಯನ್ನು ಹೊಂದಬಹುದು. ರಾಮಾಯಣ ಮತ್ತು ಮಹಾಭಾರತ ಅಲ್ಲದೆ ವಿವಿಧ ಪೌರಾಣಿಕ ಪ್ರಸಂಗಗಳನ್ನು ಆಯ್ಕೆ ಮಾಡಿ ಪುರಾಣ ವಾಚನ-ಪ್ರವಚನಕ್ಕೆ ವಿಶೇಷ ಆಕರ್ಷಕ ಆಯಾಮವನ್ನು ರೂಪಿಸುವಲ್ಲಿ ಹೇಮಾವತಿ ಹೆಗ್ಗಡೆಯವರ ಮಾರ್ಗದರ್ಶನ ಮತ್ತು ಪ್ರೇರಣೆಯನ್ನು ಹೆಗ್ಗಡೆಯವರು ಶ್ಲಾಘಿಸಿದರು.


ಪುರಾಣ ವಾಚನ – ಪ್ರವಚನದಿಂದ ಸಮಯದ ಸದುಪಯೋಗವಾಗುವುದಲ್ಲದೆ, ಧರ್ಮಜಾಗೃತಿಯೊಂದಿಗೆ ಆರೋಗ್ಯಪೂರ್ಣ ಸಮಾಜ ರೂಪುಗೊಳ್ಳುತ್ತದೆ ಎಂದು ಹೆಗ್ಗಡೆಯವರು ಅಭಿಪ್ರಾಯ ಪಟ್ಟರು.

ಧರ್ಮಸ್ಥಳದ ಕುಮಾರಿ ಸುಪ್ರಿತಾ ವಾಚನ ಮಾಡಿದರು. ಉಜಿರೆ ಅಶೋಕ ಭಟ್ ಪ್ರವಚನ ಮಾಡಿದರು.
63 ದಿನಗಳಲ್ಲಿ ನಡೆದ ಪುರಾಣ ವಾಚನ-ಪ್ರವಚನದಲ್ಲಿ ಭಾಗವಹಿಸಿದ 13 ವಾಚನಕಾರರು ಮತ್ತು 18 ಮಂದಿ ಪ್ರವಚನಕಾರರನ್ನು ಹೆಗ್ಗಡೆಯವರು ಗೌರವಿಸಿ ಅಭಿನಂದಿಸಿದರು.
ಹೇಮಾವತಿ ವೀ. ಹೆಗ್ಗಡೆಯವರು ಉಪಸ್ಥಿತರಿದ್ದರು.
ಕಾರ್ಯಕ್ರಮ ನಿರ್ವಹಿಸಿದ ಶ್ರೀನಿವಾಸ ರಾವ್ ಧನ್ಯವಾದವಿತ್ತರು. ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ, ದೇವಳದ ಪಾರುಪತ್ಯಗಾರ ಲಕ್ಷ್ಮೀನಾರಾಯಣ ರಾವ್ ಮತ್ತು ಸಂತೋಷ್ ಗೌಡ ಸಮಾರಂಭದ ಆಯೋಜನೆಯಲ್ಲಿ ಸಹಕರಿಸಿದರು.

Related posts

ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ಬ್ಯೂಟಿ ಅಂಡ್ ವೆಲ್ನೆಸ್ ನ ಉಪನ್ಯಾಸಕಿ ಪುಷ್ಪಲತಾ ರಿಗೆ “ಗುರುವೇ ನಮಃ” ಅವಾರ್ಡ್

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ರೈತಮೋರ್ಚಾದ ಸಭೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವ: ಬ್ರಹ್ಮಕಲಶೋತ್ಸವ ಸಮಿತಿಯ ಗೌರವಾಧ್ಯಕ್ಷ ಹರ್ಷೇಂದ್ರ ಕುಮಾರ್ ಧರ್ಮಸ್ಥಳ ಭೇಟಿ,

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ಗೃಹೋಪಯೋಗಿ ವಿದ್ಯುತ್‌ ಉಪಕರಣ ಸೇವಾ ಉದ್ಯಮಿ ತರಬೇತಿಯ ಸಮಾರೋಪ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya
error: Content is protected !!