24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಗ್ರಾಮೀಣ ಬ್ಲಾಕ್ ಗೆ ಜಿಲ್ಲಾ ಅಲ್ಪಸಂಖ್ಯಾತ ಘಟಕದಿಂದ ಚುನಾವಣಾ ಉಸ್ತುವಾರಿಯಾಗಿ ಮಹಮ್ಮದ್ ಹನೀಫ್ ಉಜಿರೆ ನೇಮಕ

Suddi Udaya

ಭೂಸೇನೆಯಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸುತ್ತಿರುವ ಲಾಯಿಲ ನಿವಾಸಿ ಗಣೇಶ್ ಬಿ.ಎಲ್ ಮೇ.2 ರಂದು ಸೇವಾ ನಿವೃತ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!