38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿಯ 12ನೇ ಸಹಾಯಧನ ಹಸ್ತಾಂತರ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಲಾರಿ ಪಲ್ಟಿ — ಪ್ರಾಣಾಪಾಯದಿಂದ ಪಾರಾದ ಚಾಲಕ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಅಪರಾಧ ಕೃತ್ಯಗಳ ಬಗ್ಗೆ ದೂರು ಪ್ರಕರಣ : ವಕೀಲರ ತಂಡ ಭೇಟಿ ನೀಡಿದ ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿಗೆ ಲಭ್ಯವಿರದ ವಿಷಯ: ಉದ್ದೇಶ ಪೂರ್ವಕವಾಗಿ ಸುಳ್ಳು ಮಾಹಿತಿಯನ್ನು ವರದಿ ಮಾಡಿದ ವೆಬ್ ನ್ಯೂಸ್ ಮೇಲೆ ಕೇಸು

Suddi Udaya

ಧರ್ಮಸ್ಥಳ ಸಾಧನಾ ಸಭಾಭವನದಲ್ಲಿ ಶೇ 50 ರಿಯಾಯಿತಿ ದರದಲ್ಲಿ ಬಟ್ಟೆಗಳ ಬೃಹತ್ ಮಾರಾಟ ಮೇಳ

Suddi Udaya
error: Content is protected !!