23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

Suddi Udaya

ಶಿಬಾಜೆಯಲ್ಲಿ ಸಿಮೆಂಟ್ ಶೀಟ್ ಕಟ್ಟಡ ಕೆಡವಿದ ಪ್ರಕರಣ: ಎಂಟು ಮಂದಿಯ ಮೇಲೆ ಧರ್ಮಸ್ಥಳ ಠಾಣೆಯಲ್ಲಿ ಕೇಸು ದಾಖಲು

Suddi Udaya

ಸಾಮಾಜಿಕ ಪರಿವರ್ತನೆಯ ಹರಿಕಾರ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಕಿಲ್ಲೂರಿನಲ್ಲಿ ಪ್ರತಿಷ್ಠಾಪನೆ: ಜ.11-12: ಮಿತ್ತಬಾಗಿಲು-ಮಲವಂತಿಗೆ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಗುರು ಭವನ ಉದ್ಘಾಟನೆ

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಚಾಮಾ೯ಡಿ ಘಾಟಿಯಲ್ಲಿ ಮತ್ತೆ ಕಾಡಾನೆ ಪ್ರತ್ಯಕ್ಷ: ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ವಾಹನ

Suddi Udaya
error: Content is protected !!