22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

ಪಟ್ರಮೆ : ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ಅನಾರು ದುರ್ಗಾಪರಮೇಶ್ವರಿ ದೇವಳದ ಅರ್ಚಕರಾದ ಗುರುಪ್ರಸಾದ್ ನಿಡ್ಡಣ್ಣಾಯರ ಪೌರೋಹಿತ್ಯದಲ್ಲಿ ಜರುಗಿತು.


ನೂತನ ಕಟ್ಟಡ ಸಮಿತಿ ಅಧ್ಯಕ್ಷರಾದ ಯೋಗೀಶ್ ಗೌಡ ಜಾಲು, ಕೆಸರು ಕಲ್ಲು ಹಾಕುವ ಮೂಲಕ ನೆರವೇರಿಸಿದರು. ಸಂಘದ ಅಧ್ಯಕ್ಷರಾದ ದೇವಪಾಲ ಅಜ್ರಿ ಉಳಿಯಬೀಡು ಹಾಲೆರೆದು ಪೂಜೆ ಸಲ್ಲಿಸಿದರು.

ಪಟ್ರಮೆ ಪಂಚಾಯತ್ ಅಧ್ಯಕ್ಷರಾದ ಮನೋಜ್‌ಗೌಡ ಅಂಗರಗುಡ್ಡೆ, ಒಕ್ಕೂಟದ ವಿಸ್ತರಣಾಧಿಕಾರಿಗಳಾದ ರಾಜೇಶ್.ಪಿ.ಕಾಮತ್, ನೀಲಯ್ಯ ಗೌಡ, ರುಕ್ಮಯ್ಯ ಗೌಡ, ನಿರಂಜನ್ ಜೈನ್, ಪುರಂದರ.ಎಸ್. ಸೂರ್ಯತ್ತಾವು, ಕಟ್ಟಡಕ್ಕೆ ಸ್ಥಳ ನೀಡಿದ ಚಂದ್ರಶೇಖರ ಗೌಡ ಅನಾರು ಹಾಗೂ ಸಂಘದ ನಿರ್ದೇಶಕರು ಮತ್ತು ಊರ ಸದಸ್ಯರು ಉಪಸ್ಥಿತರಿದ್ದರು.

ಶಿಲಾನ್ಯಾಸ ಸಭಾ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಗುರುಪ್ರಸಾದ್ ನಿಡ್ಡಣ್ಣಾಯರು ಮಾತನಾಡಿ ಗೋವಿನ ಮಹತ್ವ ಹಾಗೂ ದೇವರ ಅನುಗ್ರಹ ದೊರೆಯಲೆಂದು ಪ್ರಾರ್ಥಿಸಿದರು. ಪಂಚಾಯತ್‌ನ ನೂತನ ಅಧ್ಯಕ್ಷರಾದ ಮನೋಜ್ ಗೌಡ ಸಹಕಾರಿ ಸಂಘದ ಪರವಾಗಿ ಅಭಿನಂದಿಸಲಾಯಿತು. ಮನೋಜ್ ಗೌಡ ಮಾತನಾಡಿ ಹೈನುಗಾರಿಕೆಯ ಯುವಕರು ಪರಿಶ್ರಮ ಹಾಗೂ ಉತ್ಸಾಹ ಬಹಳ ಮುಖ್ಯವಾಗಿದೆ ಎಂದರು.

ಸಂಘದ ನಿರ್ದೇಶಕರಾದ ರುಕ್ಮಯ್ಯ ಗೌಡ ಪದಳ ಬಂದ ಅತಿಥಿಗಳನ್ನು ಸ್ವಾಗತಿಸಿ, ಸಿಬ್ಬಂದಿ ಶ್ರೀಮತಿ ದೀಕ್ಷಿತಾ.ಎ ಧನ್ಯವಾದವಿತ್ತರು.

Related posts

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ನಾರಾವಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ರಾಜವರ್ಮ ಜೈನ್, ಉಪಾಧ್ಯಕ್ಷರಾಗಿ ಸುಮಿತ್ರಾ ಅವಿರೋಧವಾಗಿ ಆಯ್ಕೆ

Suddi Udaya

ಗುರುವಾಯನಕೆರೆ: ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಜೊತೆಯಲ್ಲಿದ್ದ ಕಾಶಿಪಟ್ಣದ ಇಬ್ರಾಹಿಂ ಲತೀಫ್ ಬಂಧನ

Suddi Udaya

ಹೊಸಂಗಡಿಯಲ್ಲಿ ಟಿಪ್ಪರ್‌ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳು ವಶ

Suddi Udaya

ಮಹಿಳೆಯರಿಗೆ ಉಳಿತಾಯ ಮತ್ತು ಸ್ವ – ಉದ್ಯೋಗ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya
error: Content is protected !!