September 6, 2026
Uncategorizedಚಿತ್ರ ವರದಿವರದಿ

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಸರಕಾರದ ಅಧೀನ ಕಾರ್ಯದರ್ಶಿ ಶ್ರೀ ವಿಕಾಸ್, ಶ್ರೀವಾಸ್ತವ್,, ಸೆ.18 ರಂದು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಉಜಿರೆ ಗ್ರಾಮ ಪಂಚಾಯತ್ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು.


ಬಳಿಕ, ಉಜಿರೆ ಗ್ರಾಮ ಪಂಚಾಯತ್ ಕಚೇರಿಗೆ ಹಾಗೂ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಕ್ಕೆ ಸಂದರ್ಶಿಸಿ, ಗ್ರಾಮ ಪಂಚಾಯತ್ ನ ಕಾರ್ಯನಿರ್ವಹಣೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಉಷಾ ಕಿರಣ್ , ಗ್ರಾಮ ಪಂಚಾಯತ್ ಸದಸ್ಯರು, ಮಾನ್ಯ ಕಾರ್ಯನಿರ್ವಹಣಾಧಿಕಾರಿಯಾದ ಕುಸುಮಾಧರ್, AEE ನಿತಿನ್ ಕುಮಾರ್, ಸಹಾಯಕ ಇಂಜಿನಿಯರ್ ಹರ್ಷಿತ್ , ಜಿಲ್ಲಾ ಸಂಯೋಜಕರಾದ ಡೊಂಬಯ್ಯ , ಕಾರ್ಯದರ್ಶಿ ಶ್ರವಣ್ ಕುಮಾರ್ , ಸ್ವಚ್ಛತಾ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಶ್ರೀ ಧ. ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಯುವ ದಿನಾಚರಣೆ

Suddi Udaya

ಮರೋಡಿ ಪಲಾರಗೋಳಿ ಶ್ರೀ ದೈವ ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ಗರಡಿಯ ನೇಮೋತ್ಸವ: ಸಾರ್ವಜನಿಕ ಶ್ರೀ ಶನಿಪೂಜೆ

Suddi Udaya

ಜೂ.21: ಕಳಿಯ ಪ್ರಾ.ಕೃ.ಪ.ಸ. ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ, ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ ಹಾಗೂ ಎರಡನೇ ಬಾರಿಗೆ ನೂತನ ಶಾಸಕರಾಗಿ ಆಯ್ಕೆಯಾದ ಹರೀಶ್ ಪೂಂಜ ಮತ್ತು ಮದರ್ ತೆರೇಸಾ ಮೆಮೋರಿಯಲ್ ನ್ಯಾಷನಲ್ ಅವಾರ್ಡ್ ಪುರಸ್ಕೃತ ಡಾ. ಎಂ.ಎಸ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಸಿದ್ಧಶ್ರೀ ಪ್ರಶಸ್ತಿ

Suddi Udaya

ಸಾವ್ಯ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯ ಗೌರವಾಧ್ಯಕ್ಷರಾಗಿ ಶ್ರೀಧರ್ ಪೂಜಾರಿ, ಅಧ್ಯಕ್ಷರಾಗಿ ಹರೀಶ್ ಹೆಗ್ಡೆ ಆಯ್ಕೆ

Suddi Udaya
error: Content is protected !!