April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

ಕುತ್ಲೂರು: ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೋವಧೆ ಮಾಡಿ ಮಾಂಸವನ್ನು ಮಾರಾಟಕ್ಕಾಗಿ ಕೊಂಡೋಗುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಮಾಂಸ ಸಹಿತ ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೆ.18 ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ ಕೆಇಇ 1279 ನೋಂದಣಿ ಸಂಖ್ಯೆಯ ಜೀಪಿನಲ್ಲಿ ಆರೋಪಿಗಳಾದ ತೋಡುಪುಡ ತಾಲೂಕು,ಇಡ್ಕಿ ಜಿಲ್ಲೆ, ಕೇರಳ ನಿವಾಸಿ ಜಿನು ತೋಮಸ್ (34) ಮತ್ತು ಕುತ್ಲೂರು ನಿವಾಸಿ ರಂಜಿತ್ (31) ಎಂಬವರುಗಳು ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೊ ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸ್ ಉಪನಿರೀಕ್ಷಕ ಹಾಗೂ ಸಿಬ್ಬಂದಿಗಳು ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 58-2023 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ ೨೦೨೦ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ  ವಾರ್ಷಿಕ ಮಹಾಸಭೆ

Suddi Udaya

ಬೆಳ್ತಂಗಡಿ ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 28ನೇ ವರ್ಷದ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಸತ್ಯನಾರಾಯಣ ಪೂಜೆ

Suddi Udaya

ಮಿದುಳಿನ ರಕ್ತಸ್ರಾವ: ಮಹಿಳೆ ಮೃತ್ಯು

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya
error: Content is protected !!