23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

ಕುತ್ಲೂರು: ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೋವಧೆ ಮಾಡಿ ಮಾಂಸವನ್ನು ಮಾರಾಟಕ್ಕಾಗಿ ಕೊಂಡೋಗುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಮಾಂಸ ಸಹಿತ ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೆ.18 ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ ಕೆಇಇ 1279 ನೋಂದಣಿ ಸಂಖ್ಯೆಯ ಜೀಪಿನಲ್ಲಿ ಆರೋಪಿಗಳಾದ ತೋಡುಪುಡ ತಾಲೂಕು,ಇಡ್ಕಿ ಜಿಲ್ಲೆ, ಕೇರಳ ನಿವಾಸಿ ಜಿನು ತೋಮಸ್ (34) ಮತ್ತು ಕುತ್ಲೂರು ನಿವಾಸಿ ರಂಜಿತ್ (31) ಎಂಬವರುಗಳು ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೊ ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸ್ ಉಪನಿರೀಕ್ಷಕ ಹಾಗೂ ಸಿಬ್ಬಂದಿಗಳು ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 58-2023 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ ೨೦೨೦ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಸಿರಿ ಮಾತೃಶ್ರೀ ಇಂಡಸ್ಟ್ರೀಯಲ್ ಪಾರ್ಕ್ ನಲ್ಲಿ ಜಿಯೋ ಡಿಜಿಟಲ್ ಸಂಪರ್ಕ ಬಲವರ್ಧನೆ: ಜಿಯೋ ಮೊಬೈಲ್ ಟವರ್ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಯಶಸ್ವಿ ಪರಿಷ್ಕೃತ ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆ

Suddi Udaya

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya

ಬೆಳ್ತಂಗಡಿ ಬೀಟ್ ರಾಕರ್ಸ್ ಡಾನ್ಸ್ ಅಕಾಡೆಮಿಯಲ್ಲಿ ಜುಂಬಾ ಫಿಟ್ನೆಸ್ ತರಬೇತಿ ಉದ್ಘಾಟನೆ

Suddi Udaya

ಪಿಲಿಗೂಡು ಶಾಲಾ ವಾರ್ಷಿಕೋತ್ಸವ, ವಿವೇಕ ಕೊಠಡಿ ಮತ್ತು ರಂಗಮಂದಿರ ಉದ್ಘಾಟನೆ

Suddi Udaya
error: Content is protected !!