22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಕುತ್ಲೂರು: ಅಕ್ರಮ ಗೋಮಾಂಸ ಸಾಗಾಟ : ಇಬ್ಬರು ಆರೋಪಿಗಳು ಪೊಲೀಸರ ವಶ

ಕುತ್ಲೂರು: ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೋವಧೆ ಮಾಡಿ ಮಾಂಸವನ್ನು ಮಾರಾಟಕ್ಕಾಗಿ ಕೊಂಡೋಗುತ್ತಿದ್ದ ಮಾಹಿತಿ ಪಡೆದ ವೇಣೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಮತ್ತು ಸಿಬ್ಬಂದಿಗಳು ಮಾಂಸ ಸಹಿತ ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಸೆ.18 ರಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕು ಕುತ್ಲೂರು ಗ್ರಾಮದ ಕುತ್ಲೂರು ಎಂಬಲ್ಲಿ ಕೆಇಇ 1279 ನೋಂದಣಿ ಸಂಖ್ಯೆಯ ಜೀಪಿನಲ್ಲಿ ಆರೋಪಿಗಳಾದ ತೋಡುಪುಡ ತಾಲೂಕು,ಇಡ್ಕಿ ಜಿಲ್ಲೆ, ಕೇರಳ ನಿವಾಸಿ ಜಿನು ತೋಮಸ್ (34) ಮತ್ತು ಕುತ್ಲೂರು ನಿವಾಸಿ ರಂಜಿತ್ (31) ಎಂಬವರುಗಳು ಯಾವುದೇ ಪರವಾಣಿಗೆ ಇಲ್ಲದೇ, ಎಲ್ಲಿಯೋ ಅಕ್ರಮವಾಗಿ ಗೊ ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿದ್ದುದನ್ನು ಪತ್ತೆಹಚ್ಚಿದ ಪೊಲೀಸ್ ಉಪನಿರೀಕ್ಷಕ ಹಾಗೂ ಸಿಬ್ಬಂದಿಗಳು ಆರೋಪಿಗಳ ವಶದಲ್ಲಿದ್ದ 1 ಗಂಡು ಕರು ಹಾಗೂ ಸಾಗಾಟಕ್ಕೆ ಉಪಯೋಗಿಸಿದ ಜೀಪನ್ನು ಸ್ವಾಧೀನಪಡಿಸಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ವೇಣೂರು ಠಾಣೆಯಲ್ಲಿ ಅ.ಕ್ರ ನಂಬ್ರ 58-2023 ಕಲಂ: 5,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಅಧ್ಯಾದೇಶ ೨೦೨೦ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಗುರುವಾಯನಕೆರೆ ಗೆಳೆಯರ ಬಳಗದಿಂದ 78ನೇ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ವಾರ್ಷಿಕ ಕ್ರೀಡಾಕೂಟ

Suddi Udaya

ಕುವೆಟ್ಟು ವರಕಬೆ ಸಮೀಪ ರಸ್ತೆಗೆ ತುಂಡಾಗಿ ಬಿದ್ದ ಎಚ್ ಟಿ‌ ಲೈನ್ ವಿದ್ಯುತ್ ವಯರ್: ವಾಹನ ಸಂಚಾರ ಅಸ್ತವ್ಯಸ್ತ

Suddi Udaya

ಬಟ್ಲಡ್ಕ ಜಮಾಅತ್ ನ ಉರೂಸ್ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಟೆಕ್ನೊ ಸ್ಕೂಲ್ “ಲುಮಿನ್ಯಾ” ಪ್ರಾರಂಭೋತ್ಸವ ಆರಂಭ, ವಿದ್ಯಾರ್ಥಿಗಳಿಗೆ ಭವ್ಯ ಸ್ವಾಗತ

Suddi Udaya

ಕಲ್ಮಂಜ: ಸಂಚಾರಿಸುತ್ತಿರುವಾಗಲೇ ಕಳಚಿ ಬಿದ್ದ ಕೆ.ಎಸ್.ಆರ್.ಟಿ.ಸಿ. ಬಸ್ ಟಯರ್

Suddi Udaya
error: Content is protected !!